ಯವತ್ಮಾಲ್: ಮಹಾರಾಷ್ಟ್ರದಲ್ಲಿ ರಣ ಭೀಕರ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿದೆ. ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಜನರನ್ನು ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ಡಿಆರ್ಎಫ್) ಜೊತೆಗೆ ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅನ್ನು ಆನಂದನಗರ ತಾಂಡಾ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಬಳಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಮೋಲ್ ಯೆಡ್ಗೆ ತಿಳಿಸಿದ್ದಾರೆ.
ಎಸ್ಡಿಆರ್ಎಫ್ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ ಎಂದು ಅವರು ಹೇಳಿದ್ದಾರೆ. ನಾಗ್ಪುರದಿಂದ 150 ಕಿ.ಮೀ ದೂರದಲ್ಲಿರುವ ಯವತ್ಮಾಲ್ ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾರೀ ಮಳೆಯಾಗುತ್ತಿದೆ.
ಇದಕ್ಕು ಮುನ್ನ ಎರಡು ಐಎಎಫ್ ಹೆಲಿಕಾಪ್ಟರ್ಗಳು ನಾಗ್ಪುರದಿಂದ ರಕ್ಷಣಾ ಕಾರ್ಯಾಚರಣೆಗಾಗಿ ಯವತ್ಮಾಲ್ ಜಿಲ್ಲೆ ತೆರಳಿವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವೀಟ್ ಮಾಡಿದ್ದರು. ಆದರೆ ಕೇವಲ ಒಂದು ಹೆಲಿಕಾಪ್ಟರ್ ಅನ್ನು ಮಾತ್ರ ಕಳುಹಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದರು.