News Karnataka Kannada
Sunday, May 12 2024
ಮಹಾರಾಷ್ಟ್ರ

ಸೇತುವೆ ನಿರ್ಮಾಣಕ್ಕೆ ಬಳಸುತ್ತಿದ್ದ ಗರ್ಡರ್ ಲಾಂಚರ್ ಕುಸಿದು 17 ಮಂದಿ ಸಾವು: ಪ್ರಧಾನಿ ಸಂತಾಪ

crane collapses
Photo Credit : Twitter

ಮಹಾರಾಷ್ಟ್ರ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರ ಕುಸಿದು 17 ಜನರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ವೇಳೆ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸಿದ ಸ್ಥಳದಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು.

ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳೊಂದಿಗೆ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ರಕ್ಷಣಾ ಮತ್ತು ಪರಿಹಾರ ಕಾರ್ಯ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.ಗಾಯಗೊಂಡ ಮೂವರು ಕಾರ್ಮಿಕರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. “ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿದ ಭೀಕರ ದುರ್ಘಟನೆಯಿಂದ ನೋವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರ ಜೊತೆ ನಮ್ಮ ಪ್ರಾರ್ಥನೆಗಳು ಇವೆ. ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಅಪಘಾತದ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂತ್ರಸ್ತರಿಗೆ ಸರಿಯಾದ ಸಹಾಯವನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು