ಥಾಣೆ: 12 ಗಂಟೆಗಳಲ್ಲಿ 17 ರೋಗಿಗಳು ಸಾವನ್ನಪ್ಪಿದ ಘಟನೆ ಕಲ್ವಾದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ನಡೆದಿದೆ. ಅವರಲ್ಲಿ 12 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ವರದಿಯನ್ನು ಸ್ವತಃ ಆಸ್ಪತ್ರೆಯ ಆಡಳಿತ ಮಂಡಳಿಯೇ ದೃಢಪಡಿಸಿದ್ದು, ಸ್ಥಳೀಯ ಮಟ್ಟದಲ್ಲಿ ಈ ಘಟನೆ ಸಂಚಲನ ಮೂಡಿಸಿದೆ.
ರಾತ್ರಿ ಬೆಳಗಾಗೋದರಲ್ಲಿ ಜನರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಆಡಳಿತದಲ್ಲಿ ಅವ್ಯವಸ್ಥೆ, ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಿಂದ ಈ ಇಷ್ಟೊಂದು ಸಾವು ಸಂಭವಿಸಿದೆ. ಇದರ ಜೊತೆಗೆ ರೋಗಿಗಳ ಸಂಖ್ಯೆಯಲ್ಲೂ ಹೆಚ್ಚಳ ಕಂಡಿದೆ.
ಅದೇ ಊರಿನಲ್ಲಿದ್ದ ಖಾಸಗಿ ಸಿವಿಲ್ ಆಸ್ಪತ್ರೆಯೊಂದು ಮುಚ್ಚಿರುವ ಕಾರಣ ಆ ಆಸ್ಪತ್ರೆಯಿಂದ ಬಂದ ರೋಗಿಗಳು ಇಲ್ಲಿ ದಾಖಲಾಗಿದ್ದರು. ಹೀಗಾಗಿ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ ಶುಶ್ರೂಷೆ ಮಾಡಲು ಸಿಬ್ಬಂದಿಗಳು, ವೈದ್ಯರು ಮತ್ತು ವೈದ್ಯಕೀಯ ಸೌಲಭ್ಯಗಳ ಅಸಮರ್ಪಕವಾಗುತ್ತಿರುವುದೇ ಈ ಘಟನೆಗೆ ಕಾರಣ ಎಂದೂ ಹೇಳಲಾಗ್ತಿದೆ.