News Karnataka Kannada
Tuesday, April 30 2024
ಮಹಾರಾಷ್ಟ್ರ

26/11 ಮುಂಬೈ ದಾಳಿಗೆ 13 ವರ್ಷ: ಮುಂಬೈ ಪೊಲೀಸ್‌ ಇಲಾಖೆ ಕೇಂದ್ರ ಕಚೇರಿ ಆವರಣದಲ್ಲಿ ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

New Project 2021 11 26t122756.328
Photo Credit :

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ 2008ರ ನವೆಂಬರ್ 26ರಂದು ನಡೆದ ಭಯೋತ್ಪಾದಕರ ದಾಳಿ ವೇಳೆ, ಉಗ್ರರ ವಿರುದ್ಧ ಹೋರಾಡಿ ಹುತಾತ್ಮರಾದವರಿಗೆ ಶುಕ್ರವಾರ ಗೌರವ ಸಲ್ಲಿಸಲಾಯಿತು.

ದಕ್ಷಿಣ ಮುಂಬೈನಲ್ಲಿರುವ ಪೊಲೀಸ್‌ ಇಲಾಖೆ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ, ಉಪಮುಖ್ಯಮಂತ್ರಿ ಅಜಿತ್‌ ಪವಾರ್, ಗೃಹ ಸಚಿವ ದಿಲೀಪ್‌ ವಲ್ಸೆಪಾಟೀಲ್ ಅವರು ಹುತಾತ್ಮರ ಸ್ಮಾರಕ್ಕೆ ಹೂಗುಚ್ಛ ಇರಿಸಿ, ಗೌರವ ಸಲ್ಲಿಸಿದರು.ಬೆನ್ನುಹುರಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಚೇತರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಸಹ, ಹುತಾತ್ಮರಾದ ಪೊಲೀಸರು ಹಾಗೂ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಿದರು. ಕೆಲ ಹುತಾತ್ಮರ ಕುಟುಂಬದ ಸದಸ್ಯರೂ ಶ್ರದ್ಧಾಂಜಲಿ ಸಲ್ಲಿಸಿದರು.

2008ರ ನ. 26ರಂದು ಲಷ್ಕರ್‌-ಎ-ತೈಯಬಾ ಸಂಘಟನೆ ಉಗ್ರರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ಗುಂಡಿನ ದಾಳಿ ನಡೆಸಿದ್ದರು. 18 ಜನ ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು.

ಉಗ್ರರ ದಾಳಿ ಘಟನೆಗೆ 13 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೀಮಿತ ಸಂಖ್ಯೆಯ ಜನರಿಗೆ ಅವಕಾಶ ನೀಡಲಾಗಿತ್ತು. ಕೋವಿಡ್‌-19 ಪಿಡುಗಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು