ಮುಂಬೈ: ಅಮರಾವತಿ- ನಾಗ್ಪುರ ರಸ್ತೆಯ ಬಜಾರ್ಗಾವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 9 ಜನ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯು ಡ್ರೋನ್ ಮತ್ತು ಸ್ಫೋಟಕಗಳನ್ನು ತಯಾರಿಸಿ, ಭಾರತೀಯ ಸೇನೆಗೆ ಪೂರೈಸುತ್ತಿತ್ತು ಎಂದು ತಿಳಿದುಬಂದಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
‘ಕಲ್ಲಿದ್ದಲು ಗಣಿಗಳಲ್ಲಿ ಬಳಸುವ ಬೂಸ್ಟರ್ಗಳನ್ನು ಉತ್ಪಾದಿಸುವ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಉತ್ಪನ್ನಗಳನ್ನು ಸೀಲ್ ಮಾಡುವಾಗ ಸ್ಫೋಟ ಸಂಭವಿಸಿದೆ. ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ’ ಎಂದು ಸೋಲಾರ್ ಇಂಡಸ್ಟ್ರೀಸ್ ಹಿರಿಯ ಪ್ರಧಾನ ವ್ಯವಸ್ಥಾಪಕ ಆಶಿಶ್ ಶ್ರೀವಾಸ್ತವ್ ತಿಳಿಸಿದ್ದಾರೆ.
ಮೃತರಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಘಟನೆಯ ಬಗ್ಗೆ ತನಿಖೆಗೆ ಉಪಮುಖ್ಯಮಂತ್ರಿ ದೇವೇಂದ್ರ ಪಢಣವೀಸ್ ಆದೇಶಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರು ಮತ್ತು ಕಾರ್ಖಾನೆಯ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.