ಸಂಗಾತಿಯನ್ನು ಕೊಂದು ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ವ್ಯಕ್ತಿ!

ಮುಂಬಯಿ: ಕಳೆದ ವರ್ಷ ದಿಲ್ಲಿಯಲ್ಲಿ ಅಫ್ತಾಬ್‌ ಪೂನಾವಾಲ ಎಂಬಾತ ತನ್ನ ಲಿವ್‌ ಇನ್‌ ಪಾರ್ಟ್ನರ್‌ ಶ್ರದ್ಧಾ ವಾಲ್ಕರ್‌ ಎಂಬಾಕೆಯನ್ನು ಕೊಂದು ದೇಹವನ್ನು ಕತ್ತರಿಸಿ ಫ್ರಿಜ್‌ನಲ್ಲಿಟ್ಟದ್ದು, ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಮುಂಬಯಿಯಲ್ಲೂ ಇದೇ ಮಾದರಿಯ ಘಟನೆ ಸಂಭವಿಸಿದೆ.

ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್‌ನಲ್ಲಿ ಸಂಭವಿಸಿದೆ. ಆರೋಪಿ ಮನೋಜ್‌ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಲಿವ್‌ ಇನ್‌ ಪಾರ್ಟ್ನರ್‌ ಸಂಗಾತಿಯನ್ನೇ ಬರ್ಬರವಾಗಿ ಸಾಯಿಸಿದ್ದಾನೆ. ಸರಸ್ವತಿ ವೈದ್ಯ (36) ಹತ್ಯೆಯಾಗಿರುವ ಮಹಿಳೆ.

ಮಿರಾರೋಡ್‌ನ ಗೀತಾ ನಗರದಲ್ಲಿರುವ ಆಕಾಶ್‌ ದೀಪ್‌ ವಸತಿ ಸಂಕೀರ್ಣದಲ್ಲಿ ಅವರು ವಾಸವಾಗಿದ್ದರು. ಬೊರಿವಲಿಯಲ್ಲಿ ಸಣ್ಣ ಅಂಗಡಿಯೊಂದನ್ನು ಹೊಂದಿರುವ ಮನೋಜ್‌ ಸಹಾನಿಯ ಮನೆಯೊಳಗಿಂದ ದುರ್ವಾಸನೆ ಬರುತ್ತಿರುವ ಕುರಿತು ನೆರೆಮನೆಯವರು ದೂರಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ಬಂದು ಬಾಗಿಲು ತೆರೆದು ಮನೆಯೊಳಗೆ ಹೋದಾಗ ಕೊಳೆತ ಸ್ಥಿತಿಯಲ್ಲಿದ್ದ ದೇಹದ ತುಂಡುಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿದ್ದವು. ಕೊಲೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಇದು ಹೊರಜಗತ್ತಿಗೆ ತಿಳಿದುಬಂದಿದೆ.

ಮನೋಜ್‌ ಸಹಾನಿ ಮತ್ತು ಸರಸ್ವತಿ ವೈದ್ಯ ಕೆಲವು ವರ್ಷಗಳಿಂದ ಲಿವ್‌ ಇನ್‌ ಪಾರ್ಟ್ನರ್‌ ಆಗಿ ಜತೆಯಾಗಿ ವಾಸವಾಗಿದ್ದರು. ಆದರೆ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು. ಹೀಗೆ ಜಗಳವಾದಾಗ ಸಹಾನಿ ಮಹಿಳೆಯನ್ನು ಕೊಂದು ಬಳಿಕ ಸಾಕ್ಷಿ ನಾಶ ಮಾಡಲು ದೇಹವನ್ನು ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ್ದ. ಆದರೆ ಇಡೀ ದೇಹವನ್ನು ಬೇಯಿಸಿ ಮುಗಿಸಲು ಅವನಿಂದ ಸಾಧ್ಯವಾಗಿರಲಿಲ್ಲ.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

21 mins ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

31 mins ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

38 mins ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

1 hour ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

2 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

2 hours ago