ಮುಂಬೈ: ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಾಗಿದ್ದು, ಕಳೆದ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಸಿಡಿಲು ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 13 ಜನರು ಮತ್ತು ಮುಳುಗಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಇಲ್ಲಿ ತಿಳಿಸಿದ್ದಾರೆ.
ಅಕೋಲಾದ ಪರಸ್ಗಾಂವ್ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ದುರಂತದಲ್ಲಿ, ಬಾಬೂಜಿ ಮಹಾರಾಜ್ ಸಂಸ್ಥಾನದ ಆಶ್ರಮದಲ್ಲಿ 150 ವರ್ಷಗಳಷ್ಟು ಹಳೆಯದಾದ ಬೇವಿನ ಮರಕ್ಕೆ ಸಿಡಿಲು ಬಡಿದು ಕೆಳಕ್ಕುರಳಿದ್ದು, ಏಳು ಜನರು ಸಾವನ್ನಪ್ಪಿದ್ದಾರೆ. ದೇವಾಲಯದ ಆವರಣದಲ್ಲಿದ್ದ ಟಿನ್ ಶೆಡ್ ಮೇಲೆ ಮರ ಉರುಳಿ ಈ ದುರಂತ ಸಂಭವಿಸಿದೆ. 10 ಮಂದಿಯನ್ನು ರಕ್ಷಿಸಲಾಗಿದ್ದು, ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ, ಔರಂಗಾಬಾದ್, ಬೀಡ್, ಹಿಂಗೋಲಿ, ನಂದೂರ್ಬಾರ್, ಪರ್ಭಾನಿ ಮತ್ತು ಪುಣೆಯಲ್ಲಿ ಸಿಡಿಲು ಬಡಿದು ತಲಾ ಒಬ್ಬರು ರೈತರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಭಾನುವಾರ ನಾಸಿಕ್ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಒಬ್ಬರು ಒಬ್ಬರು ಕೊಚ್ಚಿಹೋಗಿದ್ದಾರೆ. ಆಲಿಕಲ್ಲು ಮಳೆಯಿಂದಾಗಿ ಅಪಾರ ಕೃಷಿ ಹಾನಿಯಾಗಿದೆ.