News Karnataka Kannada
Monday, May 06 2024
ಮಹಾರಾಷ್ಟ್ರ

ಬೆಂಕಿಗೆ ಆಹುತಿಯಾದ ಬಸ್‌: ಕನಿಷ್ಠ 25 ಮಂದಿ ಸಾವು

At least 25 killed as bus catches fire
Photo Credit : IANS

ನಾಗ್ಪುರ: ನಾಗ್ಪುರ-ಮುಂಬೈ ಸೂಪರ್-ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 25 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದರ್ಭ ಟ್ರಾವೆಲ್ಸ್‌ಗೆ ಸೇರಿದ ಬಸ್ ನಾಗ್ಪುರದಿಂದ ಪುಣೆಗೆ ಪ್ರಯಾಣಿಸುತ್ತಿದ್ದು, ನಸುಕಿನ ಜಾವ 1.15 ರ ಸುಮಾರಿಗೆ ಸಿಂಧಖೇದರಾಜ ಪ್ರದೇಶದ ಬಳಿ ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಬಸ್ ವೇಗವಾಗಿ ಚಲಿಸುತ್ತಿದ್ದಾಗ ಎಕ್ಸ್‌ಪ್ರೆಸ್ ವೇ ಡಿವೈಡರ್, ನಂತರ ಕಂಬಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಸಾಗಿ ನಿಯಂತ್ರಣ ತಪ್ಪಿ ಸ್ಫೋಟ ಸಂಭವಿಸಿದೆ. ನಂತರ ಬಸ್‌ ಬೆಂಕಿಗೆ ಆಹುತಿಯಾಗಿದೆ. ಇಬ್ಬರು ಚಾಲಕರು ಮತ್ತು ಕ್ಲೀನರ್ ಸೇರಿದಂತೆ ಬಸ್‌ನಲ್ಲಿ ಒಟ್ಟು 33 ಜನರಿದ್ದರು. 25 ಜನರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, ಐವರು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬುಲ್ಧಾನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರಂತದ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ. ಅಪಘಾತದಲ್ಲಿ ಓರ್ವ ಚಾಲಕ ಸಾವನ್ನಪ್ಪಿದ್ದು, ಎರಡನೆಯ ಚಾಲಕನಿಂದ ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು