ಮುಂಬೈ: ಕರ್ನಾಟಕದ ಬೆಳಗಾವಿ ಮತ್ತು ಮಹಾರಾಷ್ಟ್ರದ ನಡುವೆ ನಡೆಯುತ್ತಿರುವ ಗಡಿ ಮತ್ತು ಭಾಷಾ ವಿವಾದದ ನಡುವೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಹಾರಾಷ್ಟ್ರಕ್ಕೆ (Maharashtra) ತೆರಳಿ ಕನ್ನಡದಲ್ಲೇ ಭಾಷಣ ಮಾಡಿ ಗಮನಸೆಳೆದಿದ್ದಾರೆ. ಅಲ್ಲಿನ ಮರಾಠಿಗರಿಗೆ ಅರ್ಥವಾಗಲು ಮರಾಠಿಗೆ ಅನುವಾದ ಮಾಡಲಾಯಿತು.
ಹೌದು, ಸಾಂಗ್ಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ ಕನ್ನಡದಲ್ಲೇ ಭಾಷಣ ಮಾಡಿದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಕರ್ನಾಟಕ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.