ಮುಂಬೈ: ಮುಂಬೈನಲ್ಲಿ ತನ್ನ ಮೂರನೇ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ 13 ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಿದೆ. ಆ ಸಮಿತಿಯಲ್ಲಿರುವ ಸದಸ್ಯರ ವಿವರ ಈ ಕೆಳಗಿನಂತಿದೆ.
ಕೆ ಸಿ ವೇಣುಗೋಪಾಲ್ (ಕಾಂಗ್ರೆಸ್), ಶರದ್ ಪವಾರ್ (ಎನ್ಸಿಪಿ), ಎಂ ಕೆ ಸ್ಟಾಲಿನ್ (ಡಿಎಂಕೆ), ತೇಜಸ್ವಿ ಯಾದವ್ (ಆರ್ಜೆಡಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ಹೇಮಂತ್ ಸೋರೆನ್ (ಕಾಂಗ್ರೆಸ್), ಸಂಜಯ್ ರಾವುತ್ (ಯುಬಿಟಿ ಶಿವಸೇನೆ), ರಾಘವ್ ಚಡ್ಡಾ (ಎಎಪಿ), ಡಿ ರಾಜಾ (ಸಿಪಿಐ), ಒಮರ್ ಅಬ್ದುಲ್ಲಾ (ನ್ಯಾಷನಲ್ ಕಾನ್ಫರೆನ್ಸ್), ಮೆಹಬೂಬಾ ಮುಫ್ತಿ (ಪಿಡಿಪಿ) ಅವರನ್ನು ಸಮಿತಿ ಒಳಗೊಂಡಿದೆ.