ನಾಗಪುರ: ಟೀ ಕೊಡಲಿಲ್ಲ ಎಂದು ಕೋಪಗೊಂಡ ವೈದ್ಯರೊಬ್ಬರು ಸರ್ಜರಿಯನ್ನು ಅರ್ಧದಲ್ಲಿಯೇ ಬಿಟ್ಟು ಆಪರೇಷನ್ ಥಿಯೇಟರ್ನಿಂದ ಹೊರ ನಡೆದ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ನ. 3ರಂದು ನಡೆದಿದೆ. ಈ ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣ ಚರ್ಚೆಗೆ ಕಾರಣವಾಗಿದ್ದು, ವೈದ್ಯನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆ ದಿನದಂದು ಎಂಟು ಮಂದಿ ಮಹಿಳೆಯರು ಕುಟುಂಬ ಯೋಜನೆ ಸರ್ಜರಿಗೆ ಒಳಗಾಗಬೇಕಿತ್ತು.
ನಾಲ್ವರು ಮಹಿಳೆಯರಿಗೆ ವ್ಯಾಸೆಕ್ಟಮಿ ಸರ್ಜರಿ ಪೂರ್ಣಗೊಳಿಸಿದ ವೈದ್ಯ ಡಾ ತೇಜರಂಗ್ ಭಲಾವಿ, ಇನ್ನು ಉಳಿದ ನಾಲ್ಕು ಮಹಿಳೆಯರಿಗೆ ಅನಸ್ತೇಷಿಯಾ ನೀಡಿದ್ದರು. ಆಯಾಸವಾಗಿದ್ದರಿಂದ ಟೀ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದ್ದರು. ಆದರೆ ಎಷ್ಟು ಹೊತ್ತು ಕಳೆದರೂ ಆಸ್ಪತ್ರೆ ಸಿಬ್ಬಂದಿ ಟೀ ತಂದುಕೊಟ್ಟಿರಲಿಲ್ಲ. ಇದರಿಂದ ಕೋಪಗೊಂಡ ವೈದ್ಯ, ಉಳಿದ ನಾಲ್ಕು ಮಹಿಳೆಯರ ಸರ್ಜರಿ ಪೂರ್ಣಗೊಳಿಸದೆ ಆಪರೇಷನ್ ಥಿಯೇಟರ್ನಿಂದ ಹೊರ ಹೋಗಿದ್ದಾರೆ.
ಡಾ. ತೇಜರಂಗ್ ಭಲಾವಿ ಅಲ್ಲಿಂದ ಹೊರಟು ಹೋದ ನಂತರ ಆಸ್ಪತ್ರೆ ಆಡಳಿತವು ಜಿಲ್ಲಾ ವೈದ್ಯಕೀಯ ಅಧಿಕಾರಿಯನ್ನು ಸಂಪರ್ಕಿಸಿದೆ. ಅರವಳಿಕೆ ನೀಡಿ ಮಲಗಿಸಿದ್ದ ಬಾಕಿ ಮಹಿಳೆಯರ ಸರ್ಜರಿ ನಡೆಸಲು ಬೇರೊಬ್ಬ ವೈದ್ಯರನ್ನು ಕಳುಹಿಸಲಾಯಿತು. ಈ ಕುರಿತು ತನಿಖೆ ನಡೆಸಲು ಜಿಲ್ಲಾಡಳಿತ ಆದೇಶ ನೀಡಿದೆ.
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.