ಮುಂಬೈ: ಪಕ್ಷದಲ್ಲಿನ ವಿಭಜನೆಯ ನಂತರ ಪರಸ್ಪರರ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನಾ ಬಣಗಳ ಅರ್ಜಿಗಳ ಕುರಿತು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ನಿರ್ಣಾಯಕ ತೀರ್ಪು ಪ್ರಕಟಿಸಿದ್ದಾರೆ . ಶಿವಸೇನಾದಲ್ಲಿ ಒಡಕುವುಂಟಾಗಿ ಎರಡು ಬಣಗಳಾಗಿ ವಿಭಜನೆ ಆದ 18 ತಿಂಗಳ ನಂತರ ಇಂದು ಸಂಜೆ ಸ್ಪೀಕರ್ ಬಹು ನಿರೀಕ್ಷಿತ ತೀರ್ಪನ್ನು ನೀಡಿದ್ದಾರೆ.
ಏತನ್ಮಧ್ಯೆ, ಉದ್ಧವ್ ಠಾಕ್ರೆ ಅವರ ಶಿವಸೇನಾ (ಯುಬಿಟಿ) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ನಡುವಿನ “ಅತ್ಯಂತ ಅನುಚಿತ” ಸಭೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಖಂಡಿಸಿದೆ.
ಶಿವಸೇನಾದ ಎರಡು ಬಣಗಳು ಚುನಾವಣಾ ಆಯೋಗಕ್ಕೆಗೆ ಸಲ್ಲಿಸಿದ ಸಂವಿಧಾನದ ಬಗ್ಗೆ ಯಾವುದೇ ಒಮ್ಮತವಿಲ್ಲ. ನಾಯಕತ್ವ ರಚನೆಯ ಬಗ್ಗೆ ಎರಡು ಪಕ್ಷಗಳು ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿವೆ. ಏಕೈಕ ಅಂಶವೆಂದರೆ ಶಾಸಕಾಂಗ ಪಕ್ಷದಲ್ಲಿ ಬಹುಮತ. ವಿವಾದದ ಮೊದಲು ಅಸ್ತಿತ್ವದಲ್ಲಿದ್ದ ನಾಯಕತ್ವ ರಚನೆಯನ್ನು ಗಣನೆಗೆ ತೆಗೆದುಕೊಳ್ಳಬೇಕಾದ ಸಂಬಂಧಿತ ಸಂವಿಧಾನವನ್ನು ನಾನು ನಿರ್ಧರಿಸಬೇಕಾಗಿದೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.
ಅಂದರೆ ಅರ್ಜಿದಾರ ಉದ್ಧವ್ ಠಾಕ್ರೆ ಅವರ ಪತ್ರ ಪ್ರಸ್ತುತವಾಗಿಲ್ಲ. ಯಾಕೆಂದರೆ ಉದ್ಧವ್ ಠಾಕ್ರೆ ಅವರ 2018ರ ಸಂವಿಧಾನ ಸ್ವೀಕಾರರ್ಹವಲ್ಲ. ತಿದ್ದುಪಡಿ ಒಪ್ಪಲು ಸಾಧ್ಯವಿಲ್ಲ. 2018ರ ಸಂವಿಧಾನ ಗಣನೆಗೆ ತೆಗೆದುಕೊಳ್ಳಬೇಕೆಂಬುದನ್ನು ಒಪ್ಪಲ್ಲ. ಆಯೋಗದ ದಾಖಲೆ ಪ್ರಕಾರ ಶಿಂಧೆ ಬಣ ನಿಜವಾದ ಶಿವಸೇನೆಯಾಗಿದೆ. ನಿಜವಾದ ಶಿವಸೇನೆ ಯಾರು ಎಂದು ನಿರ್ಧರಿಸುವ ಹಕ್ಕು ನನಗಿದೆ ಎಂಬುದು ಸ್ಪೀಕರ್ ನಾರ್ವೇಕರ್ ಪ್ರತಿಪಾದಿಸುವ ಮೂಲಕ ಶಿಂಧೆ ಬಣ ನಿಜವಾದ ಶಿವಸೇನೆ ಎಂಬ ತೀರ್ಪು ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಶಿಂಧೆ ಹಾಗೂ ಉದ್ಧವ್ ಬಣದ ಶಾಸಕರು ಉಪಸ್ಥಿತರಿದ್ದರು.