News Karnataka Kannada
Monday, May 06 2024
ಮಹಾರಾಷ್ಟ್ರ

ವಿದ್ಯುತ್ ಬಿಲ್ ವಿಚಾರವಾಗಿ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯುತ್ ಬಿಲ್​ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದಿದೆ.
Photo Credit : NewsKarnataka

ಮಹಾರಾಷ್ಟ್ರ: ವಿದ್ಯುತ್ ಬಿಲ್​ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸ್ಟೇಟ್ ಎಲೆಕ್ಟ್ರಿಸಿಟಿ ಡಿಸ್ಟ್ರಿಬ್ಯೂಷನ್​ ಕಂ ಲಿಮಿಟೆಡ್​ನ ಮಹಿಳಾ ಟೆಕ್ನಿಷಿಯನ್​ನ ಹತ್ಯೆ ಮಾಡಿದ್ದಾರೆ. ಟೆಕ್ನಿಷಿಯನ್ 570 ರೂಪಾಯಿಯ ಹೆಚ್ಚಿನ ವಿದ್ಯುತ್ ಬಿಲ್ ನೀಡಿದ್ದಾರೆ ಎಂದು ಆರೋಪಿಸಿ ಹರಿತವಾದ ಆಯುಧದಿಂದ 16 ಬಾರಿ ಚುಚ್ಚಿ ಕೊಲೆ ಮಾಡಿದ್ದಾರೆ.

ಅಭಿಜಿತ್ ಪೋಟೆ ಬಾರಾಮತಿ ತಹಸಿಲ್‌ನ ಮೋರ್ಗಾಂವ್‌ನಲ್ಲಿರುವ ಎಂಎಸ್‌ಇಡಿಸಿಎಲ್ ಕಚೇರಿಯೊಳಗೆ ರಿಂಕು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಪಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯುತ್ ವಿತರಣಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಮಹಿಳಾ ಉದ್ಯೋಗಿ ರಿಂಕು ಬನ್ಸೋಡೆ ಸಾವನ್ನಪ್ಪಿದ್ದಾರೆ. ಅವರು ಕಳೆದ ಹತ್ತು ವರ್ಷಗಳಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು.

ಬುಧವಾರ ಬೆಳಗ್ಗೆ ಎಂಎಸ್‌ಇಡಿಸಿಎಲ್‌ ಕಚೇರಿಗೆ ತೆರಳಿ ಹತ್ತು ದಿನಗಳ ರಜೆ ಮುಗಿಸಿ ವಾಪಸಾದ ಥಿಟೆ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ಪೋಟೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು