ಮುಂಬೈ: ಮಹಾರಾಷ್ಟ್ರದ ಪುಣೆಯ ಸಾನೆ ಗುರೂಜಿ ತರುಣ್ ಮಿತ್ರ ಮಂಡಲದಲ್ಲಿರೋ ಗಣೇಶ ಪೂಜಾ ಮಂಟಪದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿತ್ತು. ಈ ವೇಳೆ ಪಟಾಕಿಗಳನ್ನು ಸಿಡಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಹಾಗೂ ಇತರೆ ರಾಜಕೀಯ ಗಣ್ಯರನ್ನು ಸುರಕ್ಷಿತವಾಗಿ ಅಲ್ಲಿಂದ ಕರೆದುಕೊಂಡು ಬರಲಾಗಿದೆ.
ಆದರೆ ಈ ಬೆಂಕಿ ಅವಘಡಕ್ಕೆ ಏನು ಕಾರಣ ಎಂದು ತಿಳಿದು ಬಂದಿಲ್ಲ. ಇನ್ನು ಮಾಹಿತಿ ತಿಳಿದು ತಕ್ಷಣ ಘಟನಾ ಸ್ಥಾಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹತೋಟಿಗೆ ತಂದಿದ್ದಾರೆ.
#Fire At Sane Guruji Tarun Mitra Mandal in #Pune
A massive fire broke out at a #Ganesh puja pandal in Pune’s Sane Guruji Tarun Mitra Mandal#GaneshChaturthi pic.twitter.com/B4rN0ey1PO
— Dr. Sandeep Seth (@sandipseth) September 26, 2023