ಮಹಾರಾಷ್ಟ್ರ: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಮಹಾರಾಷ್ಟ್ರದ ರಾಯಗಢದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. 21 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಇನ್ನೂ ಹಲವರು ಮಣ್ಣಿನಡಿ ಸಿಲುಕಿರುವ ವರದಿಯಾಗಿದೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ಮಣ್ಣಿನಡಿ ಸಿಲುಕಿದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ಸಿಲುಕಿರುವವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಭೂಕುಸಿತದಿಂದ 30ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಡಕಟ್ಟು ಜನಾಂಗದ ಹಲವಾರು ಮನೆಗಳು ಇರುವ ಖಲಾಪುರ ಬಳಿ ಈ ಘಟನೆ ನಡೆದಿದ್ದು. ಇಲ್ಲಿಯವರೆಗೆ 25 ಜನರನ್ನು ಸ್ಥಳಾಂತರಿಸಲಾಗಿದ್ದು, ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಳಿದ 21 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಇ೦ದು ಬೆಳಗ್ಗೆ ಭೂಕುಸಿತದ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.