ಮುಂಬೈ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಳಿಕ ದೇಶದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆ ನಡೆಯಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಆದರೆ ಈ ಹೇಳಿಕೆಯನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕಟುವಾಗಿ ಟೀಕಿಸಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಠಾಕ್ರೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ದೇಶದ್ಯಾಂತ ಅನೇಕ ಹಿಂದುಗಳು ಹೋಗುತ್ತಾರೆ. ವಾಪಸ್ ಬರುವ ವೇಳೆ ಗೋದ್ರಾ ಹತ್ಯಾಕಾಂಡದಂತಹ ಘಟನೆ ನಡೆಯುತ್ತದೆ. ಕೆಲವು ಕಡೆ ಬಸ್ಸುಗಳನ್ನು ಸುಡುತ್ತಾರೆ, ಕಲ್ಲು ತೂರುತ್ತಾರೆ… ಹತ್ಯಾಕಾಂಡಗಳು ನಡೆಯುತ್ತವೆ. ದೇಶ ಮತ್ತೆ ಹೊತ್ತಿ ಉರಿಯುತ್ತದೆ… ಮತ್ತು ಈ ಜ್ವಾಲೆಯ ಮೇಲೆ ಅವರು ತಮ್ಮ ರಾಜಕೀಯ ರೊಟ್ಟಿ ಬೇಯಿಸುತ್ತಾರೆ ಎಂದು ಠಾಕ್ರೆ ಹೇಳಿದ್ದಾರೆ.
ಫೆಬ್ರವರಿ 2002 ರಲ್ಲಿ ಗುಜರಾತ್ನ ಗೋಧ್ರಾ ರೈಲು ನಿಲ್ದಾಣದಲ್ಲಿ ಸಾಬರಮತಿ ಎಕ್ಸ್ಪ್ರೆಸ್ನ ಕೆಲವು ಬೋಗಿಗಳಿಗೆ ಬೆಂಕಿ ಹಚ್ಚಿದ ನಂತರ ಕನಿಷ್ಠ 58 ಜನರು ಸಾವನ್ನಪ್ಪಿದರು. ಅಲ್ಲದೆ ದೇಶದೆಲ್ಲೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.