News Karnataka Kannada
Monday, April 29 2024
ಮಹಾರಾಷ್ಟ್ರ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಳಿಕ ಗೋದ್ರಾ ಹತ್ಯಾಕಾಂಡದಂತಹ ಘಟನೆ: ಉದ್ಧವ್ ಠಾಕ್ರೆ

Godhra-like incident after inauguration of Ram temple in Ayodhya: Uddhav Thackeray
Photo Credit : News Kannada

ಮುಂಬೈ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಳಿಕ ದೇಶದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆ ನಡೆಯಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಆದರೆ ಈ ಹೇಳಿಕೆಯನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕಟುವಾಗಿ ಟೀಕಿಸಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಠಾಕ್ರೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ದೇಶದ್ಯಾಂತ ಅನೇಕ ಹಿಂದುಗಳು ಹೋಗುತ್ತಾರೆ. ವಾಪಸ್‌ ಬರುವ ವೇಳೆ ಗೋದ್ರಾ ಹತ್ಯಾಕಾಂಡದಂತಹ ಘಟನೆ ನಡೆಯುತ್ತದೆ. ಕೆಲವು ಕಡೆ ಬಸ್ಸುಗಳನ್ನು ಸುಡುತ್ತಾರೆ, ಕಲ್ಲು ತೂರುತ್ತಾರೆ… ಹತ್ಯಾಕಾಂಡಗಳು ನಡೆಯುತ್ತವೆ. ದೇಶ ಮತ್ತೆ ಹೊತ್ತಿ ಉರಿಯುತ್ತದೆ… ಮತ್ತು ಈ ಜ್ವಾಲೆಯ ಮೇಲೆ ಅವರು ತಮ್ಮ ರಾಜಕೀಯ ರೊಟ್ಟಿ ಬೇಯಿಸುತ್ತಾರೆ ಎಂದು ಠಾಕ್ರೆ ಹೇಳಿದ್ದಾರೆ.

ಫೆಬ್ರವರಿ 2002 ರಲ್ಲಿ ಗುಜರಾತ್‌ನ ಗೋಧ್ರಾ ರೈಲು ನಿಲ್ದಾಣದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳಿಗೆ ಬೆಂಕಿ ಹಚ್ಚಿದ ನಂತರ ಕನಿಷ್ಠ 58 ಜನರು ಸಾವನ್ನಪ್ಪಿದರು. ಅಲ್ಲದೆ ದೇಶದೆಲ್ಲೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು