ಗೂಗಲ್ ಪೇ ಮೊಬೈಲ್ ರೀಚಾರ್ಜ್ ಮೇಲೆ 3ರೂ. ಶುಲ್ಕ ನಿಗದಿ

ಮುಂಬೈ: ಈಗ ಪ್ರತಿ ಹಣಕಾಸಿನ ವಹಿವಾಟು ಪೋನ್‌ ಪೇ ಮತ್ತು ಗೂಗಲ್‌ ಪೇ ಮೂಲಕವೇ ನಡೆಯುತ್ತದೆ. ಆದರೆ ಗೂಗಲ್‌ ಪೇ ಮೂಲಕ ಮೊಬೈಲ್‌ ರೀಚಾರ್ಜ್‌ ಮಾಡುವವವರಿಗೆ ಶಾಕಿಂಗ್‌ ಸುದ್ದಿಯೊಂದು ಕಾದಿದೆ.

ಗೂಗಲ್ ಪೇ ಯುಪಿಐ ಸೇವೆ ಬಳಸಿಕೊಂಡು ಮೊಬೈಲ್ ರೀಚಾರ್ಜ್ ಮಾಡುವ ಬಳಕೆದಾರರಿಗೆ 3ರೂ. ಹೊಸ ಶುಲ್ಕ ಪರಿಚಯಿಸಲಾಗಿದೆ. ಬಳಕೆದಾರರು ಗೂಗಲ್ ಪೇ ಮೂಲಕ ಪ್ರೀಪೇಯ್ಡ್ ಮೊಬೈಲ್ ರಿಚಾರ್ಜ್ ಪ್ಲ್ಯಾನ್ ಆಯ್ಕೆ ಮಾಡಿದಾಗ ಈ ಶುಲ್ಕ ಅನ್ವಯಿಸುತ್ತದೆ. ಈ ಮೂಲಕ ಇಂಥ ವಹಿವಾಟುಗಳಿಗೆ ಹೆಚ್ಚುವರಿ ಶುಲ್ಕ ವಿಧಿಸದಿರುವ ಆಪ್ ನ ಈ ಹಿಂದಿನ ನೀತಿಗಳಲ್ಲಿ ಬದಲಾವಣೆ ಮಾಡಲಾಗಿದೆ.

ಈ ಹೊಸ ನೀತಿಯಿಂದ ಈಗ ಗೂಗಲ್ ಪೇ ಕೂಡ ಇತರ ಯುಪಿಐ ಪಾವತಿ ಆಪ್ ಗಳಾದ ಪೇಟಿಎಂ ಹಾಗೂ ಫೋನ್ ಪೇ ಸಾಲಿಗೆ ಸೇರ್ಪಡೆಗೊಂಡಿದೆ. ಪೇಟಿಎಂ ಹಾಗೂ ಫೋನ್ ಪೇ ಈಗಾಗಲೇ ಇಂಥ ವಹಿವಾಟುಗಳ ಮೇಲೆ ಶುಲ್ಕಗಳನ್ನು ವಿಧಿಸುತ್ತಿವೆ. ಈ ಬದಲಾವಣೆಗಳ ಹೊರತಾಗಿಯೂ ಗೂಗಲ್ ತನ್ನ ಪೇಮೆಂಟ್ ಆಪ್ ನಲ್ಲಿ ಹೆಚ್ಚುವರಿ ಕನ್ವಿನೆನ್ಸ್ ಶುಲ್ಕಗಳ ಬಗ್ಗೆ ಈ ತನಕ ಘೋಷಣೆ ಮಾಡಿಲ್ಲ.

ಒಬ್ಬರು ಗ್ರಾಹಕರು 749ರೂ. ಜಿಯೋ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಗೆ ಗೂಗಲ್ ಪೇ ಬಳಸಿ ಪಾವತಿ ಮಾಡಿದಾಗ 3ರೂ. ಶುಲ್ಕ ಸೇರಿಸಿರುವ ಸ್ಕ್ರೀನ್ ಶಾಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಬಳಿಕವಷ್ಟೇ ಬಳಕೆದಾರರಿಗೆ ಈ ಬಗ್ಗೆ ಅರಿವಾಗಿದೆ.

Ashika S

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

10 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

28 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

42 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

53 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago