ಮಹಾರಾಷ್ಟ್ರ: ಥಾಣೆ ಮತ್ತು ನೆರೆಯ ಪಾಲ್ಘಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂಜಾನೆ ಸಿಡಿಲು, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
ಥಾಣೆಯ ಭಿವಂಡಿ ಪಟ್ಟಣದ ಕಲ್ಹೇರ್ ಪ್ರದೇಶದ ದುರ್ಗೇಶ್ ಪಾರ್ಕ್ ಪ್ರದೇಶದಲ್ಲಿರುವ ಕಟ್ಟಡದ ಪ್ಲಾಸ್ಟಿಕ್ ಮೇಲ್ಛಾವಣಿಯೊಂದಕ್ಕೆ ಭಾನುವಾರ ಬೆಳಗ್ಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ ,ಎಂದು ಭಿವಂಡಿ ನಿಜಾಂಪುರ್ ಮುನ್ಸಿಪಲ್ ಕಾರ್ಪೊರೇಶನ್ನ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿ ಸಖೀಬ್ ಖರ್ಬೆ ತಿಳಿಸಿದ್ದಾರೆ.
ಘಟನೆಯಲ್ಲಿ ಬೆಂಕಿಯಿಂದ ಕಟ್ಟಡದ ಪ್ಲಾಸ್ಟಿಕ್ ಛಾವಣಿಗೆ ಹಾನಿಯಾಗಿದೆ ಎಂದು ಅವರು ಹೇಳಿದರು. ಮಾಹಿತಿ ಪಡೆದ ನಂತರ ಅಗ್ನಿಶಾಮಕ ವಾಹನ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜಸ್ಥಾನ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು ಇಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನವೆಂಬರ್ 26 ರಂದು ಪೂರ್ವ ರಾಜಸ್ಥಾನದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.