ಮಹಾರಾಷ್ಟ್ರ: ಇಲ್ಲೊಬ್ಬ ತನ್ನ ಗೆಳತಿಯ ಕಾಲಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿರುವ ಘಟನೆ ಮಹಾರಾಷ್ಟ್ರದ ಘೋಡ್ಬಂದರ್ ರಸ್ತೆಯ ಹೋಟೆಲ್ ಬಳಿ ಸೋಮವಾರ (ಡಿ.11) ನಡೆದಿದೆ.
ಈತ ಮಹಾರಾಷ್ಟ್ರ ಹಿರಿಯ ಅಧಿಕಾರಿಯೊಬ್ಬರ ಮಗನಾಗಿದ್ದು, ಥಾಣೆಯ ಹೋಟೆಲ್ ಬಳಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ,
ಆರೋಪಿ ಅಶ್ವಜಿತ್ ಗಾಯಕ್ವಾಡ್ ಮತ್ತು ಇತರ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಯುವತಿ ಅಶ್ವಜಿತ್ ಗಾಯಕ್ವಾಡ್ ಅವರನ್ನು ಭೇಟಿಯಾಗಲು ಹೋಗಿದ್ದ ವೇಳೆ ವಾಗ್ವಾದ ನಡೆಯಿತು. ನಂತರ, ಸಂತ್ರಸ್ತೆ ಕಾರಿನಿಂದ ವಸ್ತುಗಳನ್ನು ತೆಗೆದುಕೊಂಡು ಹೊರಡಲು ಸಿದ್ಧಳಾದಾಗ ಆಕೆಯ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ.
ಘಟನೆ ಬಳಿಕ ಯುವತಿ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಶ್ವಜಿತ್ ಗಾಯಕ್ವಾಡ್ ಹಿರಿಯ ಅಧಿಕಾರಿಯೊಬ್ಬರ ಮಗ ಎನ್ನುವುದು ತಿಳಿದುಬಂದಿದೆ.