ಮುಂಬಯಿ: ಹೋಟೆಲ್‌ ಉದ್ಯಮಿ ಅಪಹರಣ, ಆರೋಪಿಗಳ ಬಂಧನ

ಮುಂಬಯಿ: ಮುಂಬಯಿಯ ಹೋಟೆಲ್‌ ಉದ್ಯಮಿಯೊಬ್ಬರು ಅಪಹರಣಕ್ಕೊಳಗಾದ ಘಟನೆ ಸೋಮವಾರ ಸಂಭವಿಸಿದೆ. ಅಪಹರಣಕ್ಕೊಳಗಾದ ಹೋಟೆಲ್‌ ಉದ್ಯಮಿ ಕರಾವಳಿ ಅನೂಪ್‌ ಶೆಟ್ಟಿ ಎನ್ನಲಾಗಿದೆ.

ಸೋಮವಾರ ಮಧ್ಯಾಹ್ನದ ವೇಳೆ ಅಂಧೇರಿ ಪೂರ್ವದ ಚಕಾಲದ ಸರ್‌ ಚಥುರ್‌ದಾಸ್‌ ವಾಸಂಜಿ ರಸ್ತೆಯಲ್ಲಿರುವ ಅವರ ವೀರ ರೆಸಿಡೆನ್ಸಿ ಹೋಟೆಲ್‌ಗೆ ಬಂದ ನಾಲ್ವರು ಏರ್‌ಗನ್‌ ತೋರಿಸಿ ಅನೂಪ್‌ ಶೆಟ್ಟಿಯವರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅನೂಪ್‌ ಶೆಟ್ಟಿಯವರನ್ನು ಮಂಗಳವಾರ ಮಧ್ಯಾಹ್ನ ಪಾರು ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹಣಕಾಸಿನ ವ್ಯವಹಾರದ ತಗಾದೆಯ ಹಿನ್ನೆಲೆಯಲ್ಲಿ ಈ ಅಪಹರಣವಾಗಿದೆ. ಕೆಲ ಸಮಯ ಹೋಟೆಲ್‌ ವ್ಯವಹಾರದಲ್ಲಿ ಪಾಲುದಾರನಾಗಿದ್ದ ವ್ಯಕ್ತಿಯೇ ಹಣಕಾಸಿನ ವಿಚಾರದಲ್ಲಿ ತಗಾದೆ ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅಪಹರಣಕಾರರಲ್ಲಿ ಇಬ್ಬರು ವೈಟರ್‌ಗಳ ಸೋಗು ಹಾಕಿ ಬೆಳಗ್ಗೆ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿ ಅನೂಪ್‌ ಶೆಟ್ಟಿಯವರ ಮಾಹಿತಿಯನ್ನು ರವಾನಿಸಿದ್ದರು. ಈ ಮೂವರಲ್ಲದೆ ಕಾರು ಚಾಲಕನನ್ನು ಪೊಲೀಸರು ಪಾಡ್ಗಾ ಎಂಬಲ್ಲಿಂದ ಬಂಧಿಸಿ ಅನೂಪ್‌ ಶೆಟ್ಟಿಯವರನ್ನು ಪಾರು ಮಾಡಿದ್ದಾರೆ.

ಅಪಹರಿಸುವ ಮೊದಲು ಆರೋಪಿಗಳು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಈ ಗುಂಡು ಹೋಟೆಲ್‌ ಎದುರು ಬಿದ್ದಿತ್ತು. ಇದರಿಂದ ಅವರ ಬಳಿ ಇದ್ದದ್ದು ಏರ್‌ಗನ್‌ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಲೊಕೇಶನ್‌ ಟ್ರೇಸ್‌ ಮಾಡಿದಾಗ ಕಸಾರ ಘಾಟ್‌ ಸಮೀಪ ಪಾಡ್ಗಾ ಏರಿಯಾದಲ್ಲಿ ಅವರು ಇರುವುದು ಪತ್ತೆಯಾಗಿತ್ತು. ಬಾಕಿಯಿರುವ ಹಣ ಈಗಲೇ ಕೊಡಬೇಕೆಂದು ಹೇಳಿ ಶೆಟ್ಟಿವರನ್ನು ದುಷ್ಕರ್ಮಿಗಳು ಅಪಹರಿಸಿದ್ದರು.

ಹೋಟೆಲ್‌ಗೆ ಬಂದ ಪಾಲುದಾರ ಮೊದಲು ಅನೂಪ್‌ ಶೆಟ್ಟಿಯವರ ಜತೆ ಜಗಳವಾಡಿ ಬಳಿಕ ಬಂದೂಕು ತೋರಿಸಿ ಅವರನ್ನು ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ. ಕೂಡಲೇ ಹೋಟೆಲ್‌ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ ಕಾರಣ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿದೆ. ಎಂಐಡಿಸಿ ಠಾನೆ ಪೊಲೀಸರು ಮತ್ತು ಕ್ರೈಮ್ ಬ್ರಾಂಚ್ ಪ್ರಕರಣದ ತನಿಖೆ ನಡೆಸುತ್ತಿದೆ.

Ashika S

Recent Posts

ಮೋದಿ ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದ ಅಮಿತ್‌ ಶಾ

ಮೋದಿ  ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

13 mins ago

ಪೆನ್‌ಡ್ರೈವ್‌ ಹಂಚಿಕೆ : ಹಾಸನದ 18 ಕಡೆಗೆ ಎಸ್‌ಐಟಿ ದಾಳಿ

ಸಂಸದ ಪ್ರಜ್ಡಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ ಸಂಬಂಧ ಮಂಗಳವಾರದಿಂದ ಬುಧವಾರ…

14 mins ago

ದುಬೈನಲ್ಲಿ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆಯಿಂದ ಮೇ 26ರಂದು ʼದುಬೈ ಡ್ಯಾನ್ಸ್ ಕಪ್ -2024ʼ ಆಯೋಜನೆ

1985 ರಲ್ಲಿ ಆರಂಭವಾದ ದುಬೈನ ಮೊಟ್ಟ ಮೊದಲ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಎಂದು ಪ್ರಖ್ಯಾತಿ ಪಡೆದಿರುವ ಕರ್ನಾಟಕ ಸಂಘ ದುಬೈ…

44 mins ago

ಪ್ರಿಯತಮನೊಂದಿಗೆ ವಿಪರೀತ ಶೋಕಿ : ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌

ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ…

48 mins ago

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…

56 mins ago

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ : ಓರ್ವ ಸಾವು, 13 ಮಂದಿ ಗಾಯ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್‌ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…

1 hour ago