ಮುಂಬೈ: ವೀರ್ ಸಾವರ್ಕರ್ ಅವರನ್ನು ಅವಮಾನಿಸಿದ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ನೀಡುವುದಾಗಿ ಸಾರ್ವಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಪದೇ ಪದೇ ಅವಮಾನಿಸುತ್ತಿದ್ದು ಹೀಗಾಗಿ ರಾಹುಲ್ ಗಾಂಧಿ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ರಂಜಿತ್ ಸಾರ್ವಕರ್ ಹೇಳಿದ್ದಾರೆ.
ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಾಯಕರು ಸಾವರ್ಕರ್ ಅವರನ್ನು ಅಮಾನಿಸುತ್ತಿದ್ದಾರೆ. ಇದನ್ನೇ ತಮ್ಮ ಅಜೆಂಡವಾಗಿ ಮಾಡಿಕೊಂಡಿದ್ದಾರೆ ಎಂದು ಸಾರ್ವಕರ್ ಅವರ ಮೊಮ್ಮಗ ಹೇಳಿದ್ದಾರೆ.