ಮುಂಬೈ: ಪ್ರಸಾದ ಸೇವಿಸಿ ಅಸ್ವಸ್ಥಗೊಂಡ 300 ಮಂದಿಗೆ ರಸ್ತೆಯಲ್ಲೇ ಡ್ರಿಪ್ಸ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಲೋನಾರ್ನ ಸೋಮಥಾನ ಗ್ರಾಮದಲ್ಲಿ ಒಂದು ವಾರದಿಂದ ʼಹರಿಣಂ ಸಪ್ತಾಹʼ ಎಂಬ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದ ಕೊನೆಯ ದಿನವಾದ ಮಂಗಳವಾರ ರಾತ್ರಿ ಪ್ರಸಾದ ವಿತರಣೆ ಮಾಡಲಾಗಿತ್ತು. ಹೀಗೆ ಪ್ರಸಾದ ಸೇವಿಸಿದ ಬಳಿಕ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡರು.
ಅಸ್ವಸ್ಥರಾದವರನ್ನು ಗ್ರಾಮದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಬೆಡ್ಗಳ ಕೊರತೆಯಿಂದಾಗಿ ಬಹುತೇಕ ರೋಗಿಗಳು ಆಸ್ಪತ್ರೆಯ ಹೊರಭಾಗದ ರಸ್ತೆಯಲ್ಲೇ ಚಿಕಿತ್ಸೆ ಪಡೆಯಬೇಕಾಯಿತು. ಮರಗಳಿಗೆ ಕೊಕ್ಕೆ ಹಾಕಿದ್ದ ಹಗ್ಗಗಳ ಮೇಲೆ ಡ್ರಿಪ್ಸ್ ಬಾಟ್ಲಿಗಳನ್ನು ಅಳವಡಿಸಲಾಗಿತ್ತು. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.