News Karnataka Kannada
Saturday, May 11 2024
ಮಹಾರಾಷ್ಟ್ರ

ಮಹಾರಾಷ್ಟ್ರ: ಭೀಕರ ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ನಾಯಕ ವಿನಾಯಕ್‌ ಮೇಟೆ ನಿಧನ

Maharashtra
Photo Credit : Twitter

ಮಹಾರಾಷ್ಟ್ರ: ಇಂದು ಮುಂಜಾನೆ ರಾಯಗಢದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಾರಾಷ್ಟ್ರದ ಶಿವಸಂಗ್ರಾಮ್ ನಾಯಕ ಹಾಗೂ ಮಾಜಿ ರಾಜ್ಯ ಸಚಿವ ವಿನಾಯಕ್ ಮೇಟೆ ನಿಧನರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪನ್ವೇಲ್‌ನ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮರಾಠಾ ಮೀಸಲಾತಿ ಕುರಿತಂತೆ ಚರ್ಚೆಗಾಗಿ ಮುಂಬೈಗೆ ತೆರಳುತ್ತಿದ ವೇಳೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನ ಮಡಪ್‌ ಸುರಂಗದ ಬಳಿ ಇಂದು ಬೆಳಗಿನ ಜಾವ ಮೇಟೆ ಅವರ ಕಾರು ಅಪಘಾತಕ್ಕೀಡಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಸೇರಿದಂತೆ ಕಾರಿನಲ್ಲಿದ್ದ ಸಿಬ್ಬಂದಿಗಳಿಗೂ ಗಂಭೀರ ಗಾಯಗಳಾಗಿವೆ.

ಅಪಘಾತದಲ್ಲಿ ವಿನಾಐಕ್‌ ಮೇಟೆ ಅವರ ಲುತ್ತಿಗೆ, ಕೈಕಾಲು, ತಲೆಗೆ ತೀವ್ರ ಪೆಟ್ಟಾಗಿದ್ದು, ತಕ್ಷಣ ಅವರನ್ನು ಮಹಾತ್ಮ ಗಾಂಧಿ ಮಿಷನ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ವಿನಾಯಕ್‌ ಮೇಟೆ ನಿಧನದಿಂದ ಅವರ ಕುಟುಂಬದಲ್ಲಿ ಶೋಕ ಮನೆ ಮಾಡಿದೆ. ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು