ಮುಂಬೈ: ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿರುವ ನಟಿ ಸಮಂತಾ ಅವರು ಹಂಚಿಕೊಂಡಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಯೋಸೈಟಿಸ್ ಕಾಯಿಲೆಯಿಂದ ಗುಣವಾಗಲು ಅವರು ಹಲವು ಬಗೆಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಕ್ರಯೋಥೆರಪಿ ಕೂಡ ಒಂದು. ಬೇರೆ ಎಲ್ಲ ಚಿಕಿತ್ಸಾ ವಿಧಾನಗಳಿಗಿಂತಲೂ ಇದು ತುಂಬ ಭಿನ್ನವಾಗಿದೆ. ಇದರಿಂದ ಸಮಂತಾ ಅವರು ಆದಷ್ಟು ಬೇಗ ಚೇತರಿಕೆ ಕಾಣುವ ಸಾಧ್ಯತೆ ಇದೆ. ಮೊದಲಿನಂತೆ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.
ಸೂಕ್ತ ವಿಧಾನದ ಮೂಲಕ ಒಂದು ನಿರ್ದಿಷ್ಟ ಸಮಯದವರೆಗೆ ದೇಹವನ್ನು ಅತಿಯಾದ ಶೀತದ ವಾತಾವರಣಕ್ಕೆ ಒಡ್ಡುವ ಪ್ರಕ್ರಿಯೆಯೇ ಕ್ರಯೋಥೆರಪಿ. ಇದರಿಂದ ಹಲವು ಅನುಕೂಲತೆ ಇದೆ. ಇದರಿಂದ ರಕ್ತ ಸಂಚಾರ ಸರಾಗವಾಗುತ್ತದೆ. ದೇಹದ ಸಹಿಷ್ಠು ಶಕ್ತಿ ಹೆಚ್ಚುತ್ತದೆ. ಅಗತ್ಯ ಇರುವ ಹಾರ್ಮೋನ್ಗಳ ವೃದ್ಧಿಗೂ ಇದು ಸಹಕಾರಿ ಆಗಿದೆ. ಚರ್ಮದಲ್ಲಿ ಇರುವ ಡೆಡ್ ಸೆಲ್ಗಳನ್ನು ತೆಗೆದು ಹಾಕಲು ಕೂಡ ಈ ಚಿಕಿತ್ಸಾ ವಿಧಾನವನ್ನು ಬಳಸುತ್ತಾರೆ. ‘ರಿಕವರಿ’ ಎಂಬ ಕ್ಯಾಪ್ಷನ್ನೊಂದಿಗೆ ಸಮಂತಾ ರುತ್ ಪ್ರಭು ಅವರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…