News Karnataka Kannada
Friday, May 03 2024
ಮಣಿಪುರ

ಮಣಿಪುರವನ್ನು ಪ್ರಕ್ಷುಬ್ದ ಪ್ರದೇಶ ಎಂದು ಘೋಷಿಸಿದ ಸರ್ಕಾರ

Govt declares Manipur a disturbed area
Photo Credit : Twitter

ಇಂಫಾಲ್‌: ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹದಗೆಟ್ಟಿರುವ ಹಿನ್ನಲೆಯಲ್ಲಿ ಮಣಿಪುರ ಸರ್ಕಾರ ಇಡೀ ರಾಜ್ಯವನ್ನು ಪ್ರಕ್ಷುಬ್ಧ ಪ್ರದೇಶ ಎಂದು ಘೋಷಿಸಿದೆ.

ಆರು ತಿಂಗಳ ಅವಧಿಗೆ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ಅಡಿಯಲ್ಲಿ ಇಡೀ ರಾಜ್ಯವನ್ನು ಪ್ರಕ್ಷುಬ್ಧ ಪ್ರದೇಶ ಎಂದು ಹೇಳಿದೆ. ರಾಜ್ಯ ಸರ್ಕಾರವು ಅಧಿಸೂಚನೆಯಲ್ಲಿ, ‘ವಿವಿಧ ಉಗ್ರಗಾಮಿ/ಬಂಡಾಯ ಗುಂಪುಗಳ ಹಿಂಸಾತ್ಮಕ ಚಟುವಟಿಕೆಗಳು ಇಡೀ ರಾಜ್ಯದಲ್ಲಿ ನಾಗರಿಕ ಆಡಳಿತದ ನೆರವಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ಸಮರ್ಥಿಸುತ್ತವೆ’ ಎಂದು ಹೇಳಿದೆ.

ಶಂಕಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಮೆಟೈ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಕೊಂದ ನಂತರ ಹೊಸದಾಗಿ ಪ್ರತಿಭಟನೆಗಳು ನಡೆದಿದ್ದವು. ಇದರಿಂದ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗಳ ಮೃತದೇಹಗಳ ಚಿತ್ರಗಳು ವೈರಲ್‌ ಆದ ನಂತರ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸಕ್ಕೆ ಮೆರವಣಿಗೆ ನಡೆಸಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದ ಕಾರಣ 35 ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು