News Karnataka Kannada
Wednesday, May 01 2024
ಮಣಿಪುರ

ಮಣಿಪಾಲ ಹಿಂಸಾಚಾರ: ವಿದ್ಯಾರ್ಥಿಗಳ ಫೋಟೋ ಬಹಿರಂಗ ಮಾಡಿದ್ದ ನಾಲ್ವರು ಅರೆಸ್ಟ್‌

Unani officer arrested by CBI for demanding bribe to clear bill
Photo Credit : IANS

ಇಂಫಾಲ: ಮಣಿಪುರದಲ್ಲಿ ಮೈಥಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಸೇರಿ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗಳ ಫೋಟೋಗಳನ್ನು ಇವರೇ ಬಹಿರಂಗಪಡಿಸಿದ್ದರು. ಈ ನಾಲ್ವರ ಪೈಕಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರಾಗಿದ್ದಾರೆ. ರಾಜ್ಯದ ರಾಜಧಾನಿ ಇಂಫಾಲದಲ್ಲಿ ಇಬ್ಬರು ಯುವತಿಯನ್ನು ಬಂಧಿಸಲಾಗಿದೆ. ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ಕರೆದೊಯ್ಯಲಾಗಿದೆ.

ಇಂಫಾಲ್‌ನಿಂದ 51 ಕಿ.ಮೀ ದೂರದಲ್ಲಿರುವ ಗುಡ್ಡಗಾಡು ಜಿಲ್ಲೆ ಚುರಾಚಂದ್‌ಪುರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತರು ಸಿಕ್ಕಿಬಿದ್ದಿದ್ದಾರೆ. ಮೇ 3ರಂದು ಚುರಚಂದಪುರದಲ್ಲಿಯೇ ಜಾತಿ ಹಿಂಸಾಚಾರ ಪ್ರಾರಂಭವಾಗಿತ್ತು.

ಇತ್ತೀಚೆಗಷ್ಟೇ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡ ಕರ್ನಲ್ (ನಿವೃತ್ತ) ನೆಕ್ಟರ್ ಸಂಜೆನ್‌ಬಾಮ್ ಅವರು ಚುರಾಚಂದ್‌ಪುರದಲ್ಲಿ ಶಂಕಿತರನ್ನು ಬಂಧಿಸಲು ರಹಸ್ಯ ಕಾರ್ಯಾಚರಣೆಯನ್ನು ನಡೆಸಿದರು. ಚುರಚಂದ್‌ಪುರದಲ್ಲಿ ಹಲವಾರು ಕುಕಿ ದಂಗೆಕೋರ ಗುಂಪುಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು