ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವಿದ್ಯಾರ್ಥಿಗಳು ಮಣಿಪುರ ಮುಖ್ಯಮಂತ್ರಿ ಬೀರೆನ್ ಸಿಂಗ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಪ್ರತಿಭಟನಾನಿರತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ ನಡೆಸಿದ್ದು 34 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಪ್ರತಿಭಟನೆ ಮುಂದುವರಿದ್ದು ಬುಧವಾರ ರಾತ್ರಿ ಪ್ರತಿಭಟನಾಕಾರರು ಉರಿಪೋಕ್, ಮೈನ್ಸುಲ್, ಸಗೋಲ್ಬಂಡ್ ಮತ್ತು ಸೇರಾ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆಗೆ ಇಳಿದಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ವಸತಿ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಪ್ರತಿಭಟನಾಕಾರರು ಟೈರ್ಗಳನ್ನು ಸುಟ್ಟು, ಬಂಡಗಳನ್ನು ರಸ್ತೆಗೆ ಉರುಳಿಸಿ, ಕಬ್ಬಿಣದ ಜೈವಗಳನ್ನು ಅಡ್ಡಲಾಗಿ ಹಾಕಿದರು ಎಂದು ಅವರು ಹೇಳಿದರು. ಪ್ರತಿಭಟನಾಕಾರರು ಬಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸ ಮಾಡಿ, ಎರಡು ವಾಹನಗಳಿಗೆ ಬೆಂಕಿ ಹಾಕಿದ್ದಾರೆ, ಸಿಆರ್ ಪಿಎಫ್ ಸಿಬ್ಬಂದಿ ಪರಿಸ್ಥಿತಿಯನ್ನು ತಹಬದಿಗೆ ತಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 65 ಪ್ರತಿಭಟನಾಕಾರರು ಗಾಯಗೊಂಡಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗುತ್ತಿದ್ದಂತೆ ಇಂಪಾಲ್ ಪೂರ್ವ ಮತ್ತು ಪಶ್ಚಿಮದಲ್ಲಿ ಕರ್ಪೂ ವಿಧಿಸಲಾಗಿದೆ.