News Karnataka Kannada
Sunday, April 28 2024
ಮಣಿಪುರ

ಮ್ಯಾನ್ಮಾರ್‌- ಭಾರತ ಗಡಿಯಲ್ಲಿ ಬೇಲಿ ಹಾಕಲು ನಿರ್ಧಾರ

Myanmar-India border to be fenced
Photo Credit : Twitter

ಇಂಫಾಲ್‌: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿರುವ ನಡುವೆಯೇ, ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ನಿಯೋಜಿಸಲಾಗಿರುವ ಸೇನೆಗೆ ಪರಮಾಧಿಕಾರ ನೀಡುವ ಆಫ್ಗ್ಪಾ(ಸಶಸ್ತ್ರ ಪಡೆಗಳ ವಿಶೇಷಾಧಿಕಾರ) ಕಾಯ್ದೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಿ ರಾಜ್ಯಪಾಲರು ನಿರ್ಧಾರ ಕೈಗೊಂಡಿದ್ದಾರೆ.

ಈ ಕಾಯ್ದೆ ಅಡಿಯಲ್ಲಿ 19 ಪೊಲೀಸ್‌ ಠಾಣೆಯನ್ನು ಹೊರತುಪಡಿಸಿ ರಾಜ್ಯದ ಮಿಕ್ಕೆಲ್ಲ ಪೊಲೀಸ್‌ ಠಾಣೆಗಳು ಸಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆ ಅಡಿಗೆ ಒಳಪಡುತ್ತದೆ. ಮುಂಬರುವ ಅ.1ರಿಂದ ಜಾರಿಯಾಗುವಂತೆ 6 ತಿಂಗಳು ಕಾಯ್ದೆ ವಿಸ್ತರಣೆ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳಿಬ್ಬರ ಮೃತದೇಹ ಫೋಟೋ ವೈರಲ್‌ ಆದ ಬಳಿಕ ರಾಜ್ಯ ಮತ್ತೆ ಉದ್ವಿಗ್ನಗೊಂಡಿದೆ.

ಕಳೆದ 5 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿದ್ದ ಮಣಿಪುರದಲ್ಲಿ, ಮೇ 3ರಂದು ಸ್ಥಗಿತಗೊಳಿಸಲಾಗಿದ್ದ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಇದೇ ಶನಿವಾರ ಸೆಪ್ಟೆಂಬರ್ 23 ರಂದು ಮರುಸ್ಥಾಪಿಸಲಾಗಿತ್ತು. ಆದರೆ ಇಂಟರ್‌ನೆಟ್‌ ಮರು ಆರಂಭವಾಗುತ್ತಿದ್ದಂತೆ ಮತ್ತೆ ಗಲಭೆ ಶುರುವಾಗಿದೆ. ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌, ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ತಡೆಯಲು ಸರ್ಕಾರ ಹಲವು ಕ್ರಮ ಕೈಗೊಳ್ಳುತ್ತದೆ ಹಾಗೂ ಭಾರತ ಮತ್ತು ಮ್ಯಾನ್ಮಾರ್‌ಗಳ ಗಡಿ ಪ್ರದೇಶದಲ್ಲಿ ಸಂಪೂರ್ಣ ಬೇಲಿ ಹಾಕುವ ಅಗತ್ಯವಿದೆ.

ಹೀಗಾಗ ಮಣಿಪುರದ 60ಕಿ.ಮೀ ಅಂತಾರಾಷ್ಟ್ರೀಯ ಗಡಿಗೆ ಬೇಲಿ ಹಾಕಲು ಕೇಂದ್ರ ಗೃಹ ಸಚಿವಾಲಯ ಮುಂದಾಗಿದೆ. ಇದಲ್ಲದೇ ಭಾರತ ಮತ್ತು ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಉಭಯ ಪ್ರದೇಶಗಳ ಜನರು ಯಾವುದೇ ದಾಖಲಾತಿ ಇಲ್ಲದೇ ಪರಸ್ಪರರ ಭೂಪ್ರದೇಶದ ಒಳಗೆ 16 ಕಿ.ಮೀ ವರೆಗೆ ಚಲಿಸುವ ಉಪಕ್ರಮವನ್ನು ರದ್ದು ಮಾಡುವಂತೆ ಕೇಂದ್ರಕ್ಕೆ ಕೋರಲಾಗಿದೆ ಎಂದಿದ್ದಾರೆ.

ಅಲ್ಲದೇ ಭದ್ರತಾ ಪಡೆಗಳ ನಿಯೋಜನೆಯಿಂದ ಸಂಘರ್ಷಗಳು ಬಹುತೇಕ ಕಡಿಮೆಯಾಗಿದ್ದು 2 ತಿಂಗಳಿನಿಂದ ರಾಜ್ಯದ ಪರಿಸ್ಥಿತಿ ಸುಧಾರಿಸಿದೆ ಎಂದು ಸಿಎಂ ತಿಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು