ನವದೆಹಲಿ: ಈಶಾನ್ಯ ದೆಹಲಿಯ ಪಿಂಕ್ ಲೇನ್ನಲ್ಲಿರುವ ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗವೇ ಕುಸಿದು ಬಿದ್ದಿರುವ ದುರಂತ ಸಂಭವಿಸಿದ್ದು, ಘಟನೆಯಲ್ಲಿ 53 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ 11 ಗಂಟೆ ವೇಳೆಗೆ ಮೆಟ್ರೋ ನಿಲ್ದಾಣದ ಕೆಳಗಿರುವ ರಸ್ತೆಯ ಮೇಲೆ ನಿಲ್ದಾಣದ ಭಾಗವೊಂದು ಏಕಾಏಕಿ ಕುಸಿದುಬಿದ್ದಿದೆ.
ಈ ವೇಳೆ ರಸ್ತೆಯಲ್ಲಿ ಸ್ಕೂಟರ್ನಲ್ಲಿ ಬರುತ್ತಿದ್ದ ವಿನೋದ್ ಕುಮಾರ್ ಎಂಬುವರು ಅವಶೇಷದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಇನ್ನು ಗಾಯಾಗಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಎರಡು ಸ್ಕೂಟರ್ ಮತ್ತು ಎರಡು ಬೈಕ್ಗಳು ನಜ್ಜುಗುಜ್ಜಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಘಟನೆಯ ಹಿಂದಿನ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿಗೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿ ಗಮನ ಸೆಳೆದರು. ಕೇಂದ್ರೀಯ ಸಚಿವಾಲಯದ ಬಳಿ ಅಮೃತ ಉದ್ಯಾನಕ್ಕೆ ತೆರಳುವ ಮೆಟ್ರೋ ಫೀಡರ್ ಬಸ್ ಉದ್ಘಾಟಿಸಿದ ಬಳಿಕ ನೇರಳೆ ಮಾರ್ಗದ ಮೆಟ್ರೋದಲ್ಲಿ ನೆಹರೂ ಪ್ಲೇಸ್ವರೆಗೆ ಸಂಚರಿಸಿ ಮರಳಿ ಕೇಂದ್ರೀಯ ಸಚಿವಾಲಯ ನಿಲ್ದಾಣಕ್ಕೆ ಬಂದರು. ಈ ವೇಳೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು