Categories: ಮಿಝೋರಾಂ

ಐಜ್ವಾಲ್: 7.39 ಕೋಟಿ ಮೌಲ್ಯದ ಡ್ರಗ್ಸ್ ವಶ, 7 ಮಂದಿ ಬಂಧನ

ಐಜ್ವಾಲ್: ಮಿಜೋರಾಂನ ಹಲವು ದಾಳಿಗಲ್ಲಿ ಅಸ್ಸಾಂ ರೈಫಲ್ಸ್ ಸೈನಿಕರು 7.39 ಕೋಟಿ ಮೌಲ್ಯದ ಮೆಥಾಂಫೆಟಮೈನ್ ಮಾತ್ರೆಗಳು, ಹೆರಾಯಿನ್ ಮತ್ತು ವಿದೇಶಿ ಸಿಗರೇಟುಗಳು ಸೇರಿದಂತೆ ನಿಷೇಧಿತ ಮಾದಕವಸ್ತುಗಳು ಮತ್ತು ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಏಳು ಜನರನ್ನು ಬಂಧಿಸಿದೆ.

ನಿಷಿದ್ಧ ವಸ್ತುಗಳನ್ನು ಮ್ಯಾನ್ಮಾರ್ ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಅಸ್ಸಾಂ ರೈಫಲ್ಸ್ ಸೈನಿಕರು ಅಬಕಾರಿ ಮತ್ತು ಮಾದಕವಸ್ತು ಇಲಾಖೆಯ ಅಧಿಕಾರಿಗಳೊಂದಿಗೆ ಐಜ್ವಾಲ್ ಜಿಲ್ಲೆಯ ತುಯಿಖುರ್ಹ್ಲುವಿನಲ್ಲಿ 6.66 ಕೋಟಿ ರೂಪಾಯಿ ಮೌಲ್ಯದ 20,000 ಮೆಥಾಂಫೆಟಮೈನ್ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ನಾಲ್ವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ.

ಮತ್ತೊಂದು ಕಾರ್ಯಾಚರಣೆಯಲ್ಲಿ, ಚಂಫೈ ಜಿಲ್ಲೆಯ ಮ್ಯಾನ್ಮಾರ್ ಗಡಿಯಲ್ಲಿರುವ ಜೋಖಾವ್ಥರ್ ಗ್ರಾಮದಲ್ಲಿ 41.60 ಲಕ್ಷ ರೂ.ಗಳ ಮೌಲ್ಯದ ವಿದೇಶಿ ಸಿಗರೇಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೂರನೇ ಘಟನೆಯಲ್ಲಿ, ಅಸ್ಸಾಂ ರೈಫಲ್ಸ್ ಯೋಧರು ಚಂಫೈ ಜಿಲ್ಲೆಯ ಚಂಫೈ-ಐಜ್ವಾಲ್ ರಸ್ತೆಯಲ್ಲಿ ವಾಹನದಿಂದ 31.05 ಲಕ್ಷ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ.

Ashika S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

21 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

38 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago