ಜೈಪುರ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದು ಅಪರಾಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದಲ್ಲಿ ಬೆಂಗಳೂರಿನ ಹಲ್ಲೆ ಘಟನೆಯ ಉದಾಹರಣೆ ನೀಡಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನ ಟೊಂಕ್ನಲ್ಲಿ ಚುನಾವಣಾ ಱಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇಂದು ದೇಶಾದ್ಯಂತ ಹನುಮ ಜಯಂತಿ ಆಚರಿಸಲಾಗುತ್ತದೆ. ಇಂದು ಹನುಮ ಜಯಂತಿಯಂದು ನಿಮ್ಮೊಂದಿಗೆ ಮಾತನಾಡುವಾಗ ಕೆಲ ಹಿಂದಿನ ಘಟನೆಗಳು ನೆನಪಿಗೆ ಬರುತ್ತಿದೆ.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಅಂಗಡಿಯಲ್ಲಿ ಕುಳಿತ ಓರ್ವ ವ್ಯಕ್ತಿ ಹನುಮಾನ್ ಚಾಲೀಸಾ ಕೇಳುತ್ತಿದ್ದ ಎಂಬ ಕಾರಣಕ್ಕೆ ಕೆಲ ಕಿಡಿಗಡೆಗಳು ಆತನಿಗೆ ಥಳಿಸಿ ಹಲ್ಲೆ ಮಾಡಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿ ಒಬ್ಬರ ನಂಬಿಕೆಯನ್ನು ಪಾಲಿಸುವುದು ಕಷ್ಟ ಎಂದು ಅವರು ಟೀಕಿಸಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ತಮ್ಮ ಧಾರ್ಮಿಕ ನಂಬಿಕೆಯನ್ನು ಪಾಲಿಸುವುದು ಅಪರಾಧವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ದೇಶದ ಸಂಪತ್ತನ್ನು ಕಿತ್ತುಕೊಂಡು ಕೆಲ ಜನರಿಗೆ ಅದನ್ನು ಹಂಚಲು ಕಾಂಗ್ರೆಸ್ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ನಾನು ಬಹಿರಂಗ ಮಾಡಿದ್ದೇನೆ ಎಂದು ಹೇಳಿದ್ದಾರೆ.
Tonk-Sawai Madhopur, Rajasthan: PM Narendra Modi says, "Under Congress rule, even listening to Hanuman Chalisa becomes a sin…" pic.twitter.com/7S1UUIoboc
— IANS (@ians_india) April 23, 2024