ದೆಹಲಿ: ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಫೆಬ್ರವರಿ 20 ರಂದು ಜಮ್ಮು ಮತ್ತು ಕಾಶ್ಮೀರ ಕ್ಕೆ ಭೇಟಿ ನೀಡಲಿದ್ದಾರೆ.
ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರು 3,161 ಕೋಟಿ ರೂಪಾಯಿ ಮೌಲ್ಯದ 209 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿಯವರ ಕಾಶ್ಮೀರ ಪ್ರವಾಸ ಈಗ ಪಾಕಿಸ್ತಾನದಲ್ಲೂ ಚರ್ಚೆಯಾಗುತ್ತಿದೆ.
ಚುನಾವಣಾ ನೀತಿ ಸಂಹಿತೆ ಪ್ರಾರಂಭವಾಗುವ ಮೊದಲು ಪ್ರಧಾನಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಬೇಕೆಂದು ನಾವು ಬಯಸಿದ್ದೇವೆ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದರು.
ಇನ್ನು ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಸಾಂಬಾದ ವಿಜಯಪುರದಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್), ರಿಯಾಸಿ ಜಿಲ್ಲೆಯ ಚೆನಾಬ್ ಮೇಲಿನ ಅತಿ ಎತ್ತರದ ರೈಲ್ವೆ ಸೇತುವೆ, ಉಧಂಪುರದಲ್ಲಿ ದೇವಿಕಾ ಯೋಜನೆ, ಐಐಎಂ ಜಮ್ಮು ಮತ್ತು ಶಹಪುರ್-ಕಂಡಿ ಅಣೆಕಟ್ಟು ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 13,375 ಕೋಟಿ ರೂಪಾಯಿ ಮೌಲ್ಯದ ಹಲವಾರು ಯೋಜನೆಗಳ ಉದ್ಘಾಟನೆ ಮಾಡಿ ದೇಶಕ್ಕೆ ಸಮರ್ಪಿಸಲಿದ್ದಾರೆ.
ಚಿಕನ್ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…
ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…
ಶಾಸಕ ಇಕ್ಬಾಲ್ ಹಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ…