Categories: ದೇಶ

ಆರ್ಟಿಕಲ್ 370 ರದ್ದು ಎತ್ತಿ ಹಿಡಿದ ಸುಪ್ರೀಂ: ಪ್ರಧಾನಿ ಮೋದಿ ಫಸ್ಟ್ ರಿಯಾಕ್ಷನ್

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ಆರ್ಟಿಕಲ್ 370 ಅನ್ನು ರದ್ದು ಪಡಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಇಂದು ಎತ್ತಿ ಹಿಡಿದಿದೆ. ಸುಪ್ರೀಂ ನ ಈ ತೀರ್ಪು ಪ್ರಧಾನಿ ಮೋದಿ ಸರ್ಕಾರಕ್ಕೆ ಸಿಕ್ಕ ಅತಿ ದೊಡ್ಡ ಜಯ. ಹೀಗಾಗಿ ಪ್ರಧಾನಿ ಮೋದಿ ಕೂಡ ಸುಪ್ರೀಂ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಅವರು ಸಂವಿಧಾನದ 370ನೇ ವಿಧಿ ರದ್ದು ಮಾಡಿದ್ದನ್ನ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇದು ಭರವಸೆ, ಪ್ರಗತಿಯ ಘೋಷಣೆ. ಜಮ್ಮು ಕಾಶ್ಮೀರದ ನಮ್ಮ ಸೋದರಿಯರ ಒಗ್ಗಟ್ಟಿನ ಘೋಷಣೆ ಇದೇ ಆಗಿತ್ತು. ನಿಮ್ಮ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆ ಅಚಲ ಎಂದಿದ್ದಾರೆ.

ಸಂವಿಧಾನದ 370ನೇ ವಿಧಿಯಿಂದ ಸಮಾಜದ ನಿರ್ಲಕ್ಷಿತ, ಶೋಷಿತ ಸಮುದಾಯಗಳಿಗೆ ಪ್ರಗತಿಯ ಲಾಭ ಸಿಗಲಿದೆ. ಇಂದಿನ ತೀರ್ಪು ಕೇವಲ ಕಾನೂನಿನ ತೀರ್ಪು ಅಲ್ಲ. ಇದು ಭರವಸೆಯ ಬೆಳಕು, ಉಜ್ವಲ ಭವಿಷ್ಯದ ಭರವಸೆ. ಬಲಿಷ್ಠ, ಒಗ್ಗಟ್ಟಿನ ಭಾರತ ಕಟ್ಟುವ ನಮ್ಮ ಸಾಮೂಹಿಕ ತೀರ್ಮಾನದ ಒಡಂಬಡಿಕೆ. ಹೊಸ ಜಮ್ಮು ಕಾಶ್ಮೀರ ಉದಯವಾಗಲಿದ್ದು ಪ್ರಗತಿಯ ಫಲ ನಿಮಗೆ ತಲುಪಿಸಲು ಬದ್ಧ ಎಂದು ಮೋದಿ ಹೇಳಿದ್ದಾರೆ.

 

Ashitha S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

19 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

32 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

47 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago