ನವದೆಹಲಿ: ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸ ಅವರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಹೆಸರಾಂತ ಸನ್ಯಾಸಿಗಳಲ್ಲಿ ಒಬ್ಬರಾದ ಅಮೋಘ ಲೀಲಾ ದಾಸ್ ಅವರ ಮೇಲೆ ಇಸ್ಕಾನ್ ಒಂದು ತಿಂಗಳ ಮಟ್ಟಿಗೆ ನಿಷೇಧ ಹೇರಿದೆ. ಈ ಸಂಬಂಧ ಇಸ್ಕಾನ್ ಹೇಳಿಕೆ ಬಿಡುಗಡೆ ಮಾಡಿದೆ.
ಅಮೋಘ ಲೀಲಾ ದಾಸ್ ಅವರು ಆಧ್ಯಾತ್ಮಿಕ ಸ್ಫೂರ್ತಿ ತುಂಬುವ ಭಾಷಣಕಾರರಾಗಿದ್ದು, ಅವರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಹಳ ಜನಪ್ರಿಯವಾಗಿವೆ. ಇತ್ತೀಚೆಗೆ ಅವರು ಪ್ರವಚನ ಒಂದನ್ನು ನೀಡುವ ವೇಳೆ, ಸ್ವಾಮಿ ವಿವೇಕಾನಂದ ಅವರು ಮೀನು ಆಹಾರ ಸೇವಿಸುತ್ತಿದ್ದುದ್ದನ್ನು ಪ್ರಶ್ನಿಸಿದ್ದರು. ಸದ್ಗುಣಶೀಲ ವ್ಯಕ್ತಿಯು ಯಾವುದೇ ಪ್ರಾಣಿಗೆ ಹಾನಿ ಉಂಟುಮಾಡುವಂತಹ ಯಾವುದನ್ನೂ ಸೇವಿಸುವುದಿಲ್ಲ ಎಂದು ಅವರು ಹೇಳಿದ್ದರು.
“ಸುಗುಣಶೀಲ ವ್ಯಕ್ತಿ ಎಂದಾದರೂ ಮೀನು ತಿನ್ನುತ್ತಾರೆಯೇ? ಮೀನು ಕೂಡ ನೋವನ್ನು ಅನುಭವಿಸುತ್ತದೆ, ಅಲ್ಲವೇ? ಹಾಗಾದರೆ ಸದ್ಗುಣಶೀಲ ವ್ಯಕ್ತಿ ಮೀನು ಸೇವಿಸುತ್ತಾರೆಯೇ?” ಎಂದು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡುವಾಗ ಅವರು ಪ್ರಶ್ನಿಸಿದ್ದರು. ಇದೇ ವೇಳೆ ಸ್ವಾಮಿ ವಿವೇಕಾನಂದ ಅವರ ಗುರು ರಾಮಕೃಷ್ಣ ಪರಮಹಂಸರ ವಿರುದ್ಧ ಕೂಡ ವಾಗ್ದಾಳಿ ನಡೆಸಿದ್ದರು. ಸ್ವಾಮಿ ವಿವೇಕಾನಂದರ ಬಗ್ಗೆ ನಾನು ಅಪಾರ ಗೌರವವನ್ನು ಹೊಂದಿದ್ದೇನೆ ನಿಜ, ಅವರೇನಾದರೂ ನನ್ನೆದುರು ಇದ್ದಿದ್ದರೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿದ್ದೆ. ಆದರೆ ಅವರು ಹೇಳಿದ್ದನ್ನೆಲ್ಲವನ್ನೂ ಕುರುಡನಂತೆ ನಂಬಲಾರೆ, ಒಪ್ಪಲಾರೆ’ ಎಂದು ಅಮೋಘ ಲೀಲಾ ದಾಸರು ಈ ವಿಡಿಯೋದಲ್ಲಿ ಹೇಳಿದ್ದಾರೆ. ಇಂಥ ಅಗೌರವಯುತ ನಡೆಯನ್ನು ಸಂಸ್ಥೆಯು ಖಂಡಿಸುತ್ತದೆ’ ಎಂದು ಇಸ್ಕಾನ್ ತಿಳಿಸಿದೆ.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…