ದೇಶ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಂಜಯ್ ರಾವತ್‌ಗೆ ಜಾಮೀನು

ಮುಂಬೈ: ಪತ್ರಾ ಚಾಲ್ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಿವಸೇನಾ ನಾಯಕ ಸಂಜಯ್ ರಾವತ್‌ಗೆ ಜಾಮೀನು ದೊರಕಿದೆ. ಈ ಹಿಂದೆ ರಾವತ್ ಅವರನ್ನು ಜಾರಿ ನಿರ್ದೇಶನಾಲಯ 6 ಗಂಟೆಗಳ ಕಾಲ ವಿಚಾರಣೆ ನಡೆಸಿ, ಬಳಿಕ ಅವರನ್ನು ಬಂಧಿಸಿತ್ತು.

ಸಂಜಯ್ ರಾವತ್ ಅವರೊಂದಿಗೆ ಅವರ ಸಹಾಯಕ ಹಾಗೂ ಪ್ರಮುಖ ಆರೋಪಿ ಯಾಗಿರುವ ಪ್ರವೀಣ್ ರಾವತ್ ಅವರನ್ನೂ ಇಡಿ ಬಂಧಿಸಿದ್ದು, ಮುಂಬೈನ ವಿಶೇಷ ನ್ಯಾಯಾಲಯದಿಂದ ಅವರು ಕೂಡಾ ಜಾಮೀನು ಪಡೆದಿದ್ದಾರೆ.

ತಮ್ಮ ವಿರುದ್ಧದ ಪ್ರಕರಣ ಅಧಿಕಾರದ ದುರುಪಯೋಗ ಹಾಗೂ ರಾಜಕೀಯ ಸೇಡಿನ ಒಂದು ಪರಿಪೂರ್ಣ ಉದಾಹರಣೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಪತ್ರಾ ಚಾಲ್ ಪುನರಾಭಿವೃದ್ಧಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಹಾಗೂ ಅವರು ಕೇಸ್‌ನಿಂದ ತಪ್ಪಿಸಲು ಗುಪ್ತವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿ ರಾವತ್ ಅವರಿಗೆ ಜಾಮೀನು ಮಂಜೂರು ಮಾಡದಂತೆ ಇಡಿ ಮನವಿ ಮಾಡಿತ್ತು.

Sneha Gowda

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

13 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

28 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

56 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago