ನಾಗಾಲ್ಯಾಂಡ್‌ : ಗುಂಡಿನ ದಾಳಿ, ಯೋಧ ಸೇರಿ 13 ನಾಗರಿಕರ ದುರ್ಮರಣ

ನಾಗಾಲ್ಯಾಂಡ್‌ನ ಮೋನ್‌ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಸೇರಿದಂತೆ 13 ಮಂದಿ ನಾಗರಿಕರು ಮೃತಪಟ್ಟಿದ್ದಾರೆ.

ಕಲ್ಲಿದ್ದಲು ಗಣಿಗಾರಿಕೆ ಪ್ರದೇಶವಾದ ತಿರು ಮತ್ತು ಓಟಿಂಗ್ ಗ್ರಾಮ ನಡುವೆ ಈ ಘಟನೆ ನಡೆದಿದೆ. ಓಟಿಂಗ್‌ ಗ್ರಾಮದ ಜನರು ಒಂದು ಪಿಕ್‌ ಅಪ್‌ ಮಿನಿ ಟ್ರಕ್‌ ಮೂಲಕ  ಮನೆಗೆ ವಾಪಸ್ ಬರುತ್ತಿದ್ದ ವೇಳೆ ತಿರು ಗ್ರಾಮದ ಬಳಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಟ್ರಕ್‌ ನಲ್ಲಿದ್ದವರೆಲ್ಲ ಮೃತಪಟ್ಟಿದ್ದಾರೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಭದ್ರತಾ ಪಡೆಯ ಎರಡು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಆದರೆ ಗುಂಡಿನ ದಾಳಿ  ನಡೆಸಿದ್ದು ಯಾರೆಂಬುದರ ಬಗ್ಗೆ ನಿಖರ ಕಾರಣ ತಿಳಿದಿಲ್ಲ. ತನಿಖೆ ನಡೆಯುತ್ತಿದೆ.

“ನಾಗಾಲ್ಯಾಂಡ್‌ನ ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ (ಖಪ್ಲಾಂಗ್-ಯುಂಗ್ ಆಂಗ್) ಸದಸ್ಯರು ಎಂದು ತಪ್ಪಾಗಿ ಭಾವಿಸಿ ನಾಗರೀಕರ ಮೇಲೆ ಈ ದಾಳಿ ನಡೆದಿದೆ” ಎಂದು ಸ್ಥಳೀಯರು ಹೇಳಿದ್ದಾರೆ.

ನಾಗಾಲ್ಯಾಂಡ್​ನ ಮುಖ್ಯಮಂತ್ರಿ ನಿಫಿಯು ರಿಯೊ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ಉನ್ನತ ಮಟ್ಟದ ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ. ಓಟಿಂಗ್‌ನಲ್ಲಿ ನಾಗರಿಕರ ಹತ್ಯೆಗೆ ಕಾರಣವಾದ ದುರದೃಷ್ಟಕರ ಘಟನೆಯು ಅತ್ಯಂತ ಖಂಡನೀಯವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಕಾನೂನಿನ ಪ್ರಕಾರ ಎಲ್ಲ ರೀತಿಯ ನ್ಯಾಯವನ್ನು ಒದಗಿಸಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.

ಗೃಹಸಚಿವ ಅಮಿತ್‌ ಶಾ ಕೂಡ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದು, ” ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ಅಹಿತಕರ ಘಟನೆಯಿಂದ ಬೇಸರವಾಗಿದೆ.  ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ. ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿ ಈ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಲಿದೆ” ಎಂದು ಹೇಳಿದ್ದಾರೆ.

Sneha Gowda

Recent Posts

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

15 mins ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

16 mins ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

29 mins ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

36 mins ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

41 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

44 mins ago