ಡೆಹ್ರಡೂನ್: ಉತ್ತರಾಖಂಡದ ಉಧಮ್ ಸಿಂಗ್ ಜಿಲ್ಲೆಯ ನಾನಕಮಟ್ಟಾ ಗುರುದ್ವಾರದ ಡೇರಾ ಕರ್ ಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆಯಾಗಿದೆ.
ಸಿಂಗ್ ಅವರು ಈ ಹುಂದೆ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದಾದ ಕೆಲವು ದಿನಗಳ ನಂತರ ದುರ್ಘಟನೆ ನಡೆದಿದೆ.
ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದ್ದು, ಬೈಕ್ನಲ್ಲಿ ಬಂದ ಇಬ್ಬರು ಅವರಿದ್ದ ಮನೆ ಆವರಣಕ್ಕೆ ನುಗ್ಗಿ ಚೇರ್ ಮೇಲೆ ಕುಳಿತಿದ್ದ 60 ವರ್ಷದ ಸಿಂಗ್ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ತುರ್ತು ಚಿಕಿತ್ಸೆಗಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಗಮಿಸಿದ ಸ್ವಲ್ಪ ಸಮಯದ ನಂತರ ಕೊನೆಯುಸಿರು ಎಳೆದಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ವರದಿಗಳ ಪ್ರಕಾರ, ಸಿಂಗ್ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಲಾಗಿದೆ. ಒಂದು ಗುಂಡು ಅವರ ಹೊಟ್ಟೆಯನ್ನು ಸೀಳಿಹೊರಬಂದಿದ್ದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ,
सिखों के बड़े धार्मिक स्थल नानकमत्ता के प्रमुख सेवादार बाबा तरसेम सिंह की हत्या का Live Video –
🚨Sensitive Video🚨 https://t.co/mtAPKoNCGj pic.twitter.com/tx36Fl47wy
— Sachin Gupta (@SachinGuptaUP) March 28, 2024