Categories: ದೇಶ

ಜೆಟ್ ಏರ್ವೇಸ್​ನ ನರೇಶ್ ಗೋಯಲ್​ಗೆ ಕೊನೆಗೂ ಜಾಮೀನು ಮಂಜೂರು

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪವಿರುವ ಪ್ರಕರಣ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಕೊನೆಗೂ ಜಾಮೀನು ಮಂಜೂರುರಾಗಿದೆ.

ಬಾಂಬೆ ಉಚ್ಚ ನ್ಯಾಯಾಲಯವು ನರೇಶ್ ಗೋಯಲ್ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಒದಗಿಸಿದೆ.

ರಿಲಾಯನ್ಸ್ ಆಸ್ಪತ್ರೆಯಲ್ಲಿರುವ ನರೇಶ್ ಗೋಯಲ್ ಕ್ಯಾನ್ಸರ್ ರೋಗಿಯಾಗಿದ್ದು, ವೈದ್ಯಕೀಯ ಮತ್ತು ಮಾನವೀಯತೆಯ ಆಧಾರದ ಮೇಲೆ ಬೇಲ್ ಕೊಡಲಾಗಿದೆ. ಬದಲಾಗಿ ಒಂದು ಲಕ್ಷ ರೂ ಶೂರಿಟಿ ಪಡೆಯಲಾಗಿದೆ. ಜೆಟ್ ಏರ್ವೇಸ್​ನ ಸಂಸ್ಥಾಪಕರಾಗಿರುವ ಅವರು ಹಾಗೂ ಪತ್ನಿ ಅನಿತಾ ಇಬ್ಬರೂ ಕೂಡ ಕ್ಯಾನ್ಸರ್ ರೋಗಿಗಳಾಗಿದ್ದಾರೆ.

ಜೆಟ್ ಏರ್ವೇಸ್​ಗೆ ಕೆನರಾ ಬ್ಯಾಂಕ್​ನಿಂದ ನೀಡಲಾಗಿದ್ದ 538.62 ಕೋಟಿ ರೂ ಮೊತ್ತದ ಸಾಲವನ್ನು ಉದ್ದೇಶಿತ ಕಾರ್ಯಗಳಿಗೆ ಬಳಸದೆ ಅಕ್ರಮವಾಗಿ ಬೇರೆಡೆಗೆ ವರ್ಗಾಯಿಸಿಲಾಗಿದೆ ಎನ್ನುವ ಆರೋಪ ನರೇಶ್ ಗೋಯಲ್, ಅವರ ಪತ್ನಿ ಅನಿತಾ ಮತ್ತಿತರರ ಮೇಲೆ ಇದೆ. 2023ರ ಸೆಪ್ಟಂಬರ್​ನಲ್ಲಿ ಜಾರಿ ನಿರ್ದೇಶನಾಲಯವು ನರೇಶ್ ಗೋಯಲ್​ರನ್ನು ಬಂಧಿಸಿತ್ತು.

ನವೆಂಬರ್ ತಿಂಗಳಲ್ಲಿ ಅನಿತಾ ಗೋಯಲ್ ಅವರನ್ನೂ ಬಂಧಿಸಲಾಗಿತ್ತು. ಆದರೆ, ಅನಿತಾ ಅವರ ಆರೋಗ್ಯ ಸ್ಥಿತಿ ಗಮನಿಸಿ ಅವರಿಗೆ ವಿಶೇಷ ಕೋರ್ಟ್​ನಿಂದ ಆಗಲೇ ಜಾಮೀನು ಸಿಕ್ಕಿತ್ತು. ಇದೀಗ ನರೇಶ್ ಗೋಯಲ್​ಗೂ ಜಾಮೀನು ಮಂಜೂರು ಆಗಿದೆ.

 

 

Ashitha S

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

2 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

15 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

37 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

42 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

55 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

58 mins ago