ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ನಿಂದ ಸತ್ತವರ ಸಂಖ್ಯೆ 6ಕ್ಕೇರಿದ್ದು, ನೆರೆ ರಾಜ್ಯದಿಂದ ಕರ್ನಾಟಕದಲ್ಲಿಯೂ ಸೋಂಕು ಹರಡುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದ್ದು, ಕೇರಳಕ್ಕೆ ಅನಗತ್ಯವಾಗಿ ಹೋಗಬೇಡಿ ಎಂದು ಹೇಳಿದೆ.
ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಜ್ವರ ಕೇಂದ್ರ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ನಿಫಾ ಪ್ರಕರಣಗಳ ಸಂಪೂರ್ಣ ಮಾಹಿತಿಯನ್ನು ಕಾಲ ಕಾಲಕ್ಕೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಾ. ರಣ್ ದೀಪ್ ಹೇಳಿದ್ದಾರೆ.
ವೈರಾಣು ಸೋಂಕು ವರದಿಯಾದ ಸ್ಥಳಕ್ಕೆ ಭೇಟಿಯಾದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.