Categories: ದೇಶ

‘ನನ್ನ ಬಳಿ ಹಣ ಇಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ: ಹಣಕಾಸು ಸಚಿವೆ

ದೆಹಲಿ: “ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ವರದಿಗಳ ಪ್ರಕಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಭಾರಿ ಮೊತ್ತವನ್ನು ಉಲ್ಲೇಖಿಸಿ ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಪ್ರಸ್ತಾಪವನ್ನು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಚುನಾವಣಾ ಪ್ರಚಾರ ಮತ್ತು ಚುನಾವಣೆಗೆ ಸ್ಪರ್ಧಿಸಲು ಅಗತ್ಯವಾದ ‘ಹಣ’ ತನ್ನ ಬಳಿ ಇಲ್ಲ ಎಂದು ಸೀತಾರಾಮನ್‌ ಬಿಜೆಪಿ ಅಧ್ಯಕ್ಷರಿಗೆ ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಒಂದು ವಾರ ಅಥವಾ ಹತ್ತು ದಿನಗಳ ಕಾಲ ಯೋಚಿಸಿದ ನಂತರ, ನಾನು ‘ಬಹುಶಃ ಇಲ್ಲ’ ಎಂದು ಹೇಳಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಅಷ್ಟೊಂದು ಹಣವಿಲ್ಲ. ಅದು ಆಂಧ್ರಪ್ರದೇಶವೇ ಆಗಿರಲಿ ಅಥವಾ ತಮಿಳುನಾಡು ಆಗಿರಲಿ ನನಗೂ ಸಮಸ್ಯೆ ಇದೆ. ಇದು ಅವರು ಬಳಸುವ ಇತರ ಗೆಲುವಿನ ಮಾನದಂಡಗಳ ಪ್ರಶ್ನೆಯೂ ಆಗಿರುತ್ತದೆ ಎಂದು ಹಣಕಾಸು ಸಚಿವರು ಶೃಂಗಸಭೆ 2024 ರಲ್ಲಿ ಹೇಳಿದರು.

ಇನ್ನು ನಿರ್ಮಲಾ ಸೀತಾರಾಮನ್ ಅವರ ಈ ಹೇಳಿಕೆಗೆ ಡಿಎಂಕೆ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ಯಾವುದೇ ಚುನಾವಣೆ ಗೆಲ್ಲಲು ಹಣ ಬೇಕಾಗಿಲ್ಲ. ಚುನಾವಣೆ ಗೆಲ್ಲಲು ಜನ ಬೆಂಬಲ ಬೇಕು. ನಿರ್ಮಲಾ ಸೀತಾರಾಮನ್‌ಗೆ ಜನ ಬೆಂಬಲ ಇಲ್ಲ. ಹೀಗಾಗಿ ನಿರ್ಮಲಾ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದ ಡಿಎಂಕೆ ವಕ್ತಾರ ಶರವಣ ಅಣ್ಣಾದೊರೈ ಹೇಳಿದ್ದಾರೆ.

Ashitha S

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

10 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

13 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

26 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

30 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

43 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

45 mins ago