Categories: ಒಡಿಸ್ಸಾ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಒಡಿಶಾ: ಎಂಟು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಸ್ಥಳೀಯ ನ್ಯಾಯಾಲಯವು ಮಂಗಳವಾರ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.

ಸಂತ್ರಸ್ತ ಬಾಲಕಿಯು 2014ರ ಸೆಪ್ಟೆಂಬರ್‌ನಲ್ಲಿ ಟೈರಿಂಗ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಹೋಗಿದ್ದಾಗ, ಅರೋಪಿ ತನ್ನ ಸ್ನೇಹಿತರ ಸಹಾಯದಿಂದ ಆಕೆಯನ್ನು ಅಪಹರಿಸಿದ್ದರು. ನಂತರ ರೈಲಿನಲ್ಲಿ ಆಕೆಯನ್ನು ಗುಜರಾತ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದನು.

ಮಯೂರ್‌ಭಂಜ್‌ನ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸುಮಿತಾ ಜೆನಾ ಅವರು ಅಪರಾಧಿಗೆ ಕಠಿಣ ಶಿಕ್ಷೆಯೊಂದಿಗೆ 9,000 ರೂ.ದಂಡವನ್ನು ವಿಧಿಸಿದ್ದಾರೆ.

ಅಷ್ಟೇ ಅಲ್ಲದೇ, ಸತ್ರಸ್ತೆ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಅಭಿನವ್ ಕುಮಾರ್ ಪಟ್ನಾಯಕ್ ಹೇಳಿದರು.

ಮಗಳು ಕಾಣದಿದ್ದಾಗ, ತಂದೆ ನಾಪತ್ತೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದರು. ನಡೆದ ಘಟನೆ ಬಗ್ಗೆ ತಿಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಕ್ಕೆ ಒಪ್ಪಿಸಿದ್ದರು.

Swathi MG

Recent Posts

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

4 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

29 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

45 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 hour ago