ಒಡಿಶಾ : ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಒಡಿಶಾದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಆರು ಮಂದಿ ಮೃತಪಟ್ಟಿದ್ದಾರೆ.
ಕೇಂದ್ರಪಾರ ಜಿಲ್ಲೆಯಲ್ಲಿ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿ ಮೂವರು, ಖೋರ್ಧಾ, ಗಂಜಾಂ ಮತ್ತು ಸಬರ್ನ್ಪುರದಲ್ಲಿ ತಲಾ ಒಬೊಬ್ಬರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
24 ಜಿಲ್ಲೆಗಳಾದ್ಯಂತ ಒಟ್ಟು 23,82,795 ಜನರು ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿದ್ದು, ಕೆಲವು ಕಡೆ ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ. ರಸ್ತೆಗಳೆಲ್ಲ ಜಲಾಮಯವಾಗಿದೆ ವರದಿ ತಿಳಿಸಿದೆ.
ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ ಬಲಸೋರ್, ಭದ್ರಕ್ ಮತ್ತು ಕೇಂದ್ರಪಾರಾ ಜಿಲ್ಲೆಗಳಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದೆ