ಭುವನೇಶ್ವರ: ಒಡಿಶಾದ ಆರು ಜಿಲ್ಲೆಗಳಲ್ಲಿ ಶನಿವಾರ ಸಿಡಿಲಿನ ಆಘಾತಕ್ಕೆ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಈ ನಡುವೆ ಮುಂದಿನ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಖುರ್ದಾ ಜಿಲ್ಲೆಯಲ್ಲಿ ನಾಲ್ವರು, ಬೋಲಂಗಿರ್ನಲ್ಲಿ ಇಬ್ಬರು ಮತ್ತು ಅಂಗುಲ್, ಬೌಧ್, ಜಗತ್ಸಿಂಗ್ಪುರ ಮತ್ತು ಧೆಂಕನಾಲ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ.
ಶನಿವಾರ ಸಿಡಿಲು ಬಡಿದು ಖುರ್ದಾದಲ್ಲಿ ಮೂವರು ಗಾಯಗೊಂಡಿದ್ದಾರೆ. ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
Total lightning strikes across Odisha till 5.30pm today (2nd September ) are:
1. CC : 36,597
2. CG : 25,753@mcbbsr @SRC_Odisha @SecyChief @PradeepJenaIAS @satyabrata1967 pic.twitter.com/ewpOuzlOQi— OSDMA Odisha (@osdmaodisha) September 2, 2023