ಒಡಿಶಾ: ಒಡಿಶಾದ ಗಂಜಾಂನಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗುರುವಾರ ರಾತ್ರಿ ಸೊರಡ ಸಮೀಪದ ಕೇಶರಿಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು.
ಮೃತರನ್ನು ಆಶುರಬಂದ್ನ ಶ್ರೀಕಾಂತ್ ಗೌಡ, ದುಲಾದದ ಮನೋಜ್ ಡಾಕುವಾ, ಗೋಪಾಲಪುರ ಸಶನ್ನ ಮಹೇಂದ್ರ ನಾಯಕ್, ಸೊರಡದ ಜಯಂತ್ ಬಡತ್ಯ ಮತ್ತು ಸನಾ ಸೊರಡದ ರಜನಿ ಗೌಡ ಎಂದು ಗುರುತಿಸಲಾಗಿದೆ.
ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಜಯಂತ್ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ.
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…