ಒರಿಸ್ಸ : ಕಟಕ್ ನಿಲ್ದಾಣದಲ್ಲಿ ಭುವನೇಶ್ವರ-ಹೌರಾ ಜನ್ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಳಿಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆದರೆ, ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಿತು.
ಸದ್ಯ ಯಾವುದೇ ಪ್ರಾಣಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ತಿಳಿದುಬಂದಿಲ್ಲ. ಸೆಪ್ಟೆಂಬರ್ನಲ್ಲಿ ಗುಜರಾತ್ನ ವಲ್ಸಾದ್ ಬಳಿ ಹಮ್ಸಫರ್ ಎಕ್ಸ್ಪ್ರೆಸ್ನ ಪವರ್ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಅಕ್ಕಪಕ್ಕದ ಎರಡು ಬೋಗಿಗಳಿಗೆ ಆವರಿಸಿತ್ತು. ಆರ್ಪಇಎಫ್ ಮತ್ತು ಜಿಆರ್ಪಿಎಫ್ ತಂಡದ ನೆರವಿನಿಂದ ಬೆಂಕಿಯನ್ನು ಹತೋಟಿಗೆ ತರಲಾಗಿತ್ತು.