News Karnataka Kannada
Monday, May 13 2024
ಒಡಿಸ್ಸಾ

ಕ್ಯಾಪಿಟಲ್​ ಲೆಟರ್​ಗಳಲ್ಲೇ ವೈದ್ಯರು ಪ್ರಿಸ್ಕ್ರಿಪ್ಷನ್ ಬರೆಯಬೇಕು: ಹೈಕೋರ್ಟ್

ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಬಹುತೇಕ ವೈದ್ಯರ ಬರಹ ಅಸ್ಪಷ್ಟವಾಗಿರುತ್ತದೆ. ಹೀಗಾಗಿ ಏನು ಬರೆದಿದ್ದಾರೆ ಎಂದು ತಿಳಿದುಕೊಳ್ಳಲು ಕಷ್ಟವಾಗುತ್ತದೆ. ಔಷಧ ಚೀಟಿ ನೋಡಿ ವೈದ್ಯರನ್ನು ಶಪಿಸಿದವರಲ್ಲಿ ನೀವು ಕೂಡ ಒಬ್ಬರಾಗಿರಬಹುದು. ಈ ವಿಚಾರದಲ್ಲಿ ಒಡಿಶಾ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ.
Photo Credit : News Kannada

ಭುವನೇಶ್ವರ್​: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಬಹುತೇಕ ವೈದ್ಯರ ಬರಹ ಅಸ್ಪಷ್ಟವಾಗಿರುತ್ತದೆ. ಹೀಗಾಗಿ ಏನು ಬರೆದಿದ್ದಾರೆ ಎಂದು ತಿಳಿದುಕೊಳ್ಳಲು ಕಷ್ಟವಾಗುತ್ತದೆ. ಔಷಧ ಚೀಟಿ ನೋಡಿ ವೈದ್ಯರನ್ನು ಶಪಿಸಿದವರಲ್ಲಿ ನೀವು ಕೂಡ ಒಬ್ಬರಾಗಿರಬಹುದು. ಈ ವಿಚಾರದಲ್ಲಿ ಒಡಿಶಾ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ಎಲ್ಲ ವೈದ್ಯರು ವೈದ್ಯಕೀಯ ಚೀಟಿ, ಮರಣೋತ್ತರ ವರದಿ ಮತ್ತು ವೈದ್ಯಕೀಯ ಅಧಿಕೃತ ದಾಖಲೆಗಳನ್ನು ಸ್ಪಷ್ಟವಾದ ಕೈಬರಹ ಅಥವಾ ಕ್ಯಾಪಿಟಲ್​ ಲೆಟರ್​ಗಳಲ್ಲಿ ಬರೆಯುವುದನ್ನು ಆರೋಗ್ಯ ಇಲಾಖೆ ಖಚಿತಪಡಿಸಿಕೊಳ್ಳಬೇಕೆಂದು ಒಡಿಶಾ ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣವೊಂದರ ವಿಚಾರಣೆ ನಡೆಸಿದ ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯ ನ್ಯಾ. ಎಸ್​.ಕೆ. ಪಾಣಿಗ್ರಹಿ ಈ ನಿರ್ದೇಶನ ನೀಡಿದ್ದಾರೆ. ಸಾರ್ವಜನಿಕರು ಮತ್ತು ನ್ಯಾಯಾಂಗ ವ್ಯವಸ್ಥೆಗೆ ಸುಲಭವಾಗುವಂತೆ ಸ್ಪಷ್ಟ ಕೈಬರಹ ಇರಲಿ ಎಂದು ಎಲ್ಲ ವೈದ್ಯಕೀಯ ಕೇಂದ್ರ, ಖಾಸಗಿ ಕ್ಲೀನಿಕ್​ಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೂ ಕೂಡ ನ್ಯಾಯಾಲಯ ಸೂಚಿಸಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು