News Karnataka Kannada
Monday, April 29 2024
ಒಡಿಸ್ಸಾ

ಮನೆಯ ತೋಟದಲ್ಲಿದ್ದ ತರಕಾರಿ ತಂದು ತಿಂದಿದ್ದಕ್ಕೆ ತಾಯಿ ಮೇಲೆ ಹಲ್ಲೆ ಮಾಡಿದ ಮಗ

New Project 2023 12 25t073920.700
Photo Credit : News Kannada

ಒಡಿಶಾ: ಮನೆಯ ತೋಟದಲ್ಲಿದ್ದ ತರಕಾರಿ ತಂದು ತಿಂದಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯ ಮೇಲೆ ಹಲ್ಲೆ ಮಾಡಿದ ಘಟನೆ ಒಡಿಶಾದ ಕಿಯೊಂಜರ್ ಜಿಲ್ಲೆಯ ಸರಸಪಾಸಿ ಗ್ರಾಮದಲ್ಲಿ ನಡೆದಿದೆ.

ತಾನು ಬೆಳೆದಿದ್ದ ಹೂಕೋಸು ಕಿತ್ತು ತಂದಿದ್ದಕ್ಕೆ ಅಮ್ಮನಿಗೆ ಕೊಡಬಾರದ ಹಿಂಸೆ ನೀಡಿದ್ದಾನೆ. ಹಲ್ಲೆ ಬಳಿಕ ಹೊಲದಲ್ಲಿರುವ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ್ದಾನೆ. 70 ವರ್ಷದ ವೃದ್ಧೆ ತನ್ನ ಕಿರಿಯ ಮಗನ ಜಮೀನಿನಲ್ಲಿ ಬೆಳೆಯಲಾಗಿದ್ದ ತರಕಾರಿಯನ್ನು ಕೊಯ್ದು ಮನೆಯಲ್ಲಿ ಅಡುಗೆ ಮಾಡಿದ್ದಳು. ಈ ವಿಚಾರ ಗೊತ್ತಾಗ್ತಿದ್ದಂತೆಯೇ ಆಕೆಗೆ ಈ ಶಿಕ್ಷೆ ನೀಡಿದ್ದಾನೆ ಎನ್ನಲಾಗಿದೆ.

ಆಕೆಯನ್ನು ರಕ್ಷಣೆ ಮಾಡಲು ಹೋದಾಗ ಊರಿನ ಜನರಿಗೂ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕೊನೆಗೂ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿದ್ದಾರೆ.    ಮಗನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು