Categories: ದೇಶ

ಪ್ರಿಯಕರನ ವರಿಸಲು 45 ದಿನಗಳ ವೀಸಾ ಪಡೆದು ಭಾರತಕ್ಕೆ ಬರಲಿದ್ದಾರೆ ಪಾಕ್​ ಯುವತಿ

ದೆಹಲಿ: ಭಾರತದ ಯುವಕ ಹಾಗೂ ಪಾಕಿಸ್ತಾನಿ ಯುವತಿ ನಡುವೆ ಪ್ರೀತಿಯ ಮೊಳಕೆ ಚಿಗುರೊಡೆದಿದೆ. ಹಾಗೆಯೇ ಯುವತಿಯು 45 ದಿನಗಳ ವೀಸಾ ಪಡೆದು ಯುವಕನನ್ನು ಮದುವೆಯಾಗಲು ಭಾರತಕ್ಕೆ ಬರಲಿದ್ದಾರೆ. ಅಟ್ಟಾರಿ-ವಾಘಾ ಗಡಿ ಮೂಲಕ ದೇಶಕ್ಕೆ ಬರುತ್ತಿದ್ದು, ಭಾರತ ಸರ್ಕಾರ ಆಕೆಗೆ 45 ದಿನಗಳ ವೀಸಾ ನೀಡಿದೆ.

ಜವ್ರಿಯಾ ಕೋಲ್ಕತ್ತಾ ಮೂಲದ ಸಮೀರ್ ಖಾನ್ ಅವರನ್ನು ವರಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಹಿಳೆ ತನ್ನ ತಂದೆಯೊಂದಿಗೆ ಭಾರತಕ್ಕೆ ಬರಲಿದ್ದಾರೆ. ಕರಾಚಿ ನಿವಾಸಿ, ಅಜ್ಮತ್ ಇಸ್ಮಾಯಿಲ್ ಖಾನ್ ಮತ್ತು ಅವರ ಮಗಳನ್ನು ಸಮೀರ್ ಖಾನ್ ಮತ್ತು ಅವರ ತಂದೆ ಅಹ್ಮದ್ ಕಮಲ್ ಖಾನ್ ಯೂಸುಫ್ಜೈ ಅವರು ದೇಶಕ್ಕೆ ಸ್ವಾಗತಿಸಲಿದ್ದಾರೆ.

ಈ ಹಿಂದೆ ಸೀಮಾ ಎಂಬುವವರು ಭಾರತದ ಸಚಿನ್ ಮೀನಾ ಅವರೊಂದಿಗೆ ಪ್ರೀತಿಯಲ್ಲಿ ಬಿದ್ದು, ಮದುವೆ ಮಾಡಿಕೊಳ್ಳುವ ಸಲುವಾಗಿ ತನ್ನ ಮಕ್ಕಳನ್ನೂ ಕಡೆದುಕೊಂಡು ಭಾರತಕ್ಕೆ ಬಂದಿದ್ದರು. ಇತ್ತ ಅಂಜು ಎಂಬುವವರು ಪಾಕಿಸ್ತಾನಿ ಸ್ನೇಹಿತನ್ನು ಮದುವೆಯಾಗಲು ಪತಿ ಹಾಗೂ ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ತೆರಳಿದ್ದ ಘಟನೆಯೂ ವರದಿಯಾಗಿತ್ತು.

Ashitha S

Recent Posts

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

2 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

13 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

27 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

48 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago