News Karnataka Kannada
Monday, April 29 2024
ದೇಶ

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ: ಪ್ರಧಾನಿ ಮೋದಿ

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ  ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ
Photo Credit : News Kannada

ನವದೆಹಲಿ: ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ  ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ ತನಿಖೆ ನಡೆಯಬೇಕು,ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಸಂಸತ್ತಿನಲ್ಲಿ ನಡೆದ ಘಟನೆಯ ಗಂಭೀರತೆಯನ್ನು ಕಡೆಗಣಿಸಬಾರದು, ಹಾಗಾಗಿ ಲೋಕಸಭಾ ಸ್ಪೀಕರ್ ಕೆಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಘಟನೆಯ ಹಿಂದಿನ ಉದ್ದೇಶವೇನು ಎಂದು ತಿಳಿಯಲು ವಿಷಯದ ಆಳಕ್ಕೆ ಹೋಗುವುದು ಮುಖ್ಯ, ಒಟ್ಟಾಗಿ ಪರಿಹಾರ ಸಿಗಬೇಕು ಎಂದಿದ್ದಾರೆ.

ಡಿ.13 ರಂದು ಸಾಗರ್ ಹಾಗೂ ಮನೋರಂಜನ್ ಎನ್ನುವ ಇಬ್ಬರು ಸದನದೊಳಗೆ ನುಗ್ಗಿ ಹೊಗೆ ಕ್ಯಾನ್ ಎಸೆದಿದ್ದರು, ಲೋಕಸಭೆ ಪೂರ್ತಿ ಹೊಗೆ ತುಂಬಿಕೊಂಡಿದ್ದ ಕಾರಣ ಎಲ್ಲರೂ ಭಯಭೀತರಾಗಿದ್ದರು.

Read More:
https://kannada.newskarnataka.com/etare/crime/security-breach-case-mobile-parts-of-accused-found-in-rajasthan/17122023

https://kannada.newskarnataka.com/world/desha/delhi/security-lapse-speaker-writes-to-mps/16122023

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು